Featured

ಪುತ್ತೂರು: ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ -Vishwanews24

ಪುತ್ತೂರು: ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ -Vishwanews24

ಪುತ್ತೂರು: ಕಂಬಳವು ಕರಾವಳಿ ಭಾಗದಲ್ಲಿ ಜಾನಪದ ಪರಂಪರೆಯಾಗಿ ಬೆಳೆದು ಬಂದಿದ್ದು, ರೋಮಾಂಚಕವಾಗಿರುವ ಈ ಕ್ರೀಡೆಯ ಬಗ್ಗೆ ಎಲ್ಲರಿಗೂ ಪ್ರೀತಿ ಮೂಡಬೇಕು. ಕಂಬಳದ ಕೋಣಗಳ ಸಂಖ್ಯೆ ಹೆಚ್ಚಾಗಬೇಕು ಎಂದು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಹೇಳಿದ್ದಾರೆ.

ಅವರು ಶುಕ್ರವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಬಾಕಿಮಾರು ಗದ್ದೆಯಲ್ಲಿ ನಡೆಯುತ್ತಿರುವ 28ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳವನ್ನು ಕರೆಗೆ ತೆಂಗಿನಕಾಯಿ ಒಡೆಯುವ ಮೂಲಕ ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪುತ್ತೂರು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ, ಪುತ್ತೂರಿನ ಕಂಬಳವು ದೇವಳದ ಜಾತ್ರಾ ಗದ್ದೆಯಲ್ಲಿ ಪುತ್ತೂರಿನ ಜಾತ್ರೋತ್ಸವ ಮಾದರಿಯಲ್ಲಿ ನಡೆಯುತ್ತಿರುವ ಎರಡನೇ ಉತ್ಸವವಾಗಿದೆ ಎಂದರು.

ಕ್ರೀಡಾಭಿಮಾನಿಗಳಿಗೆ ಗುಡ್ ನ್ಯೂಸ್ : ಜುಲೈನಿಂದ ಪ್ರೊ ಕಬಡ್ಡಿ ಪ್ರಾಂಭ -Vishwanews24

ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ, ಕಂಬಳವು ಕರಾವಳಿ ಜಿಲ್ಲೆಯ ಮಣ್ಣಿನ ಕ್ರೀಡೆಯಾಗಿದೆ. ಇದೀಗ ಕಂಬಳವು ಹೊಸ ರೂಪ ಪಡೆದು ಎಲ್ಲರ ಆಕರ್ಷಣೆಗೆ ಒಳಗಾಗುತ್ತಿದೆ. ಕಂಬಳ ಕ್ರೀಡೆಯನ್ನು ಬೆಂಬಲಿಸುವುದು ಎಲ್ಲರ ಕರ್ತವ್ಯ ಎಂದರು.

ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್., ಸುಧಾನ ದೇವಾಲಯದ ಧರ್ಮಗುರು ರೆ.ಫಾ. ವಿಜಯ ಹಾರ್ವಿನ್, ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಪುತ್ತೂರು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಎಲ್.ಟಿ.ಅಬ್ದುರ್ರಝಾಕ್ ಹಾಜಿ, ಮಹಾಲಿಂಗ ನಾಯ್ಕ ಪಾಲ್ತಾಡು, ಮಾಜಿ ನಗರ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ನ್ಯಾಯವಾದಿ ರಹೀಂ, ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಚೆನ್ನಪ್ಪ ರೈ ದೇರ್ಲ, ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದ ಆಡಳಿತ ಮೊಕ್ತೇಸರ ಅಜಿತ್ ಕುಮಾರ್ ಜೈನ್ ಮಾತನಾಡಿ ಶುಭ ಹಾರೈಸಿದರು.

ಶಿವಮೊಗ್ಗ: ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲದ ರೂಪಾಂತರಿ ವೈರಸ್‌ ಪತ್ತೆಯಾಗಿಲ್ಲ : .ಈಶ್ವರಪ್ಪ ಸ್ಪಷ್ಟನೆ -Vishwanews24

ವೇದಿಕೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್ ಪಿ.ವಿ., ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪ್ರಸನ್ನ ಹೆಬ್ಬಾರ್, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅನುವಂಶಿಕ ಮೊಕ್ತೇಸರ ರಾಮಮೋಹನ ರೈ, ಪರ್ಪುಂಜ ಬ್ರಹ್ಮಬೈದರ್ಕಳ ಗರಡಿಯ ಆಡಳಿತ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು, ನ್ಯಾಯವಾದಿ ಫಝ್ಲುಲ್ ರಹೀಂ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮ್‌ದಾಸ್ ಗೌಡ, ರವೀಂದ್ರ ರೈ ಬಳ್ಳಮಜಲು, ಶೇಖರ ನಾರಾವಿ, ರಾಮಚಂದ್ರ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

ಕೋಟಿ-ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಸದಸ್ಯ ವಸಂತ ಕುಮಾರ್ ರೈ ದುಗ್ಗಳ ವಂದಿಸಿದರು. ಉಪಾಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ಶೀಘ್ರದಲ್ಲೇ ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಮಧುಬಂಗಾರಪ್ಪ -Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

8 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

9 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

9 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

9 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

9 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

11 hours ago