ಪುತ್ತೂರು : ಖಾಸಗಿ ನರ್ಸಿಂಗ್ ಹೋಮ್ಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ದಾಖಲಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ” ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಸಾರ್ವಜನಿಕರನ್ನು ಪ್ರಚೋದಿಸುತ್ತೇಬೆ ಮತ್ತು ಜನರಿಗೆ ಹೇಳಿ ಹೊಡೆಸುತ್ತೇನೆ, ಈ ಆಸ್ಪತ್ರೆಗಳ ವಿರುದ್ಧ ಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ. ಇಲ್ಲದಿದ್ದರೆ, ನಾನು ಸುಮ್ಮನಿರುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಟೌನ್ ಪೊಲೀಸ್ ಠಾಣೆ ದೂರು ನೀಡಲಾಗಿದೆ.
ಖಾಸಗಿ ನರ್ಸಿಂಗ್ ಹೋಮ್ಗಳು ಸುಲಿಗೆ ನಡೆಸುವುದನ್ನು ನಿಲ್ಲಿಸದಿದ್ದರೆ ಜನರನ್ನು ಕಳಿಸಿ ಹೊಡೆಸುತ್ತೇವೆ ಎಂದು ಸಹ ಹೇಳಿದ್ದ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಈ ಬೆನ್ನಲ್ಲೇ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಸದಸ್ಯ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…