ಪುತ್ತೂರು :ಕಿಲ್ಲರ್ ಡೆಂಗ್ಯೂ ದಕ್ಷಿಣ ಕನ್ನಡದ ನೆಲ್ಯಾಡಿ ಯಲ್ಲಿ ಮಹಿಳೆಯೊಬ್ಬಳನ್ನು ಬಲಿ ಪಡೆದಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35 )ಮೃತ ಮಹಿಳೆಯಾಗಿದ್ದಾಳೆ. ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದ ಲೀಲಾವತಿಗೆ ನಾಲ್ಕೈದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಆರಂಭದಲ್ಲಿ ಉದನೆಯ ಕ್ಲಿನಿಕ್ವೊಂದರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಜ್ವರ ಹತೋಟಿಗೆ ಬಾರದೆ ಉಲ್ಬಣಿಸಿದ ಹಿನ್ನೆಲೆಯಲ್ಲಿ ಅಕ್ಟೋಬರ್ 25ರಂದು ರಾತ್ರಿ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆ ಆ ನಂತರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಲೀಲಾವತಿ ಸಾವನ್ನಪ್ಪಿದ್ದಾರೆ. ಮೃತ ಲೀಲಾವತಿ ಅವರು ಪತಿ ಬಾಬು, ಪುತ್ರ ಶಯನ್, ಪುತ್ರಿ ಸಾನ್ವಿ ಅವರನ್ನು ಅಗಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…