ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲ್ವಾರ್ ಹಿಡಿದುಕೊಂಡು ಪೋಸು ಕೊಟ್ಟಿದ್ದ ಇಬ್ಬರು ಆರೋಪಿಗಳ ಫೊಟೋ ವೈರಲ್ ಆದ ಹಿನ್ನಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ದ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ಗುರುವಾರ ನಡೆದಿದೆ.
ಬಂಧಿತರನ್ನು ಪುತ್ತೂರು ತಾಲೂಕಿನ ಕುರಿಯದ ಕಟ್ಟದ ಬೈಲಿನ ಸುಜಿತ್, ಆರ್ಯಾಪುವಿನ ಮರಿಕೆಯ ಪುಟ್ಟಣ್ಣ ಎಂದು ಗುರುತಿಸಲಾಗಿದೆ. ಆರೋಪಿಗಳು ತಲವಾರು ಹಿಡಿದಿರುವ ಫೊಟೋ ಹಾಕಿ ಸಮಯ ಎಂದು ಶೀರ್ಷಿಕೆ ಬರೆದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದರು.
ಆರೋಪಿಗಳು ತಲ್ವಾರ್ ಹಿಡಿದು ಫೊಟೋ ತೆಗೆದು ಅದನ್ನು ವಾಟ್ಸಪ್ನಲ್ಲಿ ಬುಧವಾರ ಸಂಜೆ ಅಪ್ಲೋಡ್ ಮಾಡಿದ್ದರು. ಈ ಫೊಟೋ ಸಾಕಷ್ಟು ವೈರಲ್ ಆಗಿತ್ತು. ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿರುವ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ತಡರಾತ್ರಿ ಅವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಗಳ ಪೈಕಿ ಓರ್ವನಾದ ಸುಜಿತ್ ಅವರು ಈ ಹಿಂದೆ ಹಿಂದೂ ಜಾಗರಣಾ ವೇದಿಕೆಯಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…