Featured

ಪುತ್ತೂರು : ತಿಂಗಳಾಡಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪಿ ಬದ್ರುದ್ದೀನ್ ಪೊಲೀಸ್ ವಶಕ್ಕೆ – Vishwanews24

ಪುತ್ತೂರು : ತಿಂಗಳಾಡಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪಿ ಬದ್ರುದ್ದೀನ್ ಪೊಲೀಸ್ ವಶಕ್ಕೆ

ಪುತ್ತೂರು: ತಾಲ್ಲೂಕಿನ ತಿಂಗಳಾಡಿಯಲ್ಲಿ ಸೂಪರ್ ಬಜಾರ್ ಮಳಿಗೆಯಲ್ಲಿ ಮಹಿಳೆಗೆ ಬುಧವಾರ ಸಂಜೆ ಲೈಂಗಿಕ ಕಿರುಕುಳ ನೀಡಿದ‌ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ರಾತ್ರಿಯೇ ವಶಕ್ಕೆ‌ ಪಡೆದಿದ್ದಾರೆ.

ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀಬ್ ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಜನರಲ್ ಸ್ಟೋರ್ ಸ್ಟೀಟ್ ಸ್ಟಾಲ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಅಂಗಡಿಯ ಮಾಲಿಕರಿಗೆ ಹಣವನ್ನು ನೀಡುತ್ತಿರುವಾಗ ಅಂಗಡಿಯೊಳಗೆ ಬಂದ ಆರೋಪಿಯು ಏಕಾಏಕಿ ಫಿರ್ಯಾದುದಾರರ ಸೊಂಟದ ಹಿಂಬದಿಗೆ ಕೈ ಹಾಕಿ ಫಿರ್ಯಾದುದಾರರ ನಿತಂಬವನ್ನು ಹಿಚುಕಿದ್ದ.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಆ ವೇಳೆ ಮಹಿಳೆ ಬೊಬ್ಬೆ ಹಾಕಿ ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತನು ಅಂಗಡಿಯಿಂದ ಹೊರಗೆ ಓಡಿ ಹೋಗಿದ್ದ. ಅಂಗಡಿಯ ಮಾಲೀಕರಲ್ಲಿ ವಿಚಾರಿಸಿದಾಗ ಆ ಯುವಕನು ಸೊರಕೆಯ ಬದ್ರುದ್ದೀನ್ ಎಂದು ಗೊತ್ತಾಗಿದೆ. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಮಹಿಳೆ ದೂರಿನಲ್ಲಿ ಕೋರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳೀಯ ಮುಖಂಡರು ಹಾಗೂ ಸಂಘ ಪರಿವಾರದ ಸಂಘಟನೆಗಳ ಪ್ರಮುಖರು ಸೇರಿದಂತೆ ನೂರಾರು ಮಂದಿ ಮಳಿಗೆ ಬಳಿ ಸೇರಿದ್ದರು. ಆರೋಪಿಯನ್ನು ತಕ್ಷಣ ಬಂಧಿಸದಿದ್ದರೆ ಗುರುವಾರ, ತಿಂಗಳಾಡಿ ಬಂದ್ ಮಾಡಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.

ಮಂಗಳೂರು: ಜಿಲ್ಲಾಧಿಕಾರಿ ಮೊಬೈಲ್ ನಂಬರ್ ಹ್ಯಾಕ್ ..ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಡಿಸಿ ಮನವಿ..

Vishwa News 24

Recent Posts

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ : ಸಿಎಂ. ಡಿ ಕೆ ಶಿ – vishwanews24

ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…

28 seconds ago

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

8 minutes ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…

20 minutes ago

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

19 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

19 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

20 hours ago