ಪುತ್ತೂರು : ತುಳು ಚಿತ್ರನಟ,ನಿರ್ದೇಶಕ ದೇವದಾಸ್ ಕಾಪಿಕಾಡರ ಬಿಜೆಪಿ ಪಕ್ಷ ಸೇರ್ಪಡೆ ವಿವಾದ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಸ್ಪಷ್ಟನೆ ನೀಡಿದ್ದು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ ಎಂದಿದ್ದಾರೆ.
ಮಾದ್ಯಮಗಳಿಗೆ ಈ ಬಗ್ಗೆ ಹೇಳಿಕೆ ನೀಡಿದ ಅವರು ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಡಿ ದೇವದಾಸ್ ಕಾಪಿಕಾಡ್ ಮನೆಗೆ ಭೇಟಿ ನೀಡಿದ್ದು ನಿಜ. ಪಕ್ಷದ ಸದಸ್ಯನಾಗಿ ಮಾಡುವ ಉದ್ಧೇಶದಿಂದ ಅವರ ಮನೆಗೆ ಹಿರಿಯರು ಭೇಟಿ ನೀಡಿದ್ದರು. ಸದಸ್ಯತ್ವ ಅಭಿಯಾನದ ವಿಚಾರದಲ್ಲಿ ಅವರು ಪೂರಕವಾಗಿ ಸ್ಪಂದಿಸಿದ್ದರು. ಪಕ್ಷಾತೀತವಾಗಿರುವ ಸೆಲೆಬ್ರೆಟಿಗಳ ಮನೆಗೆ ಪಕ್ಷದ ಮುಖಂಡರು ಭೇಟಿಯಾಗೋದು ಸಾಮಾನ್ಯವಾಗಿದ್ದು ಅವರು ಪಕ್ಷದ ಕಾರ್ಯಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳುತ್ತಾರೆ ಎಂದಲ್ಲ.
ದೇವದಾಸ್ ಕಾಪಿಕಾಡ್ ರನ್ನು ಇತರ ಪಕ್ಷದವರೂ ಭೇಟಿಯಾಗುತ್ತಾರೆ. ಇದೇ ವಿಚಾರವನ್ನಿಟ್ಟು ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎನ್ನುವ ಸುಳ್ಳು ಸುದ್ಧಿ ಹರಡಲಾಗಿದೆ. ದೇವದಾಸ್ ಕಾಪಿಕಾಡ್ ತುಳು ಭಾಷೆಯನ್ನು ರಾಷ್ಟ್ರ ಮಟ್ಟದಲ್ಲಿ ಪರಿಚಯಿಸಿದಂತಹ ಕಲಾವಿದರಾಗಿದ್ದಾರೆ. ಸ್ವಭಾವಿಕವಾಗಿ ಅವರು ಪಕ್ಷದ ಹಿತ ಚಿಂತಕರು ಆಗಿರಬಹುದು. ಈ ಹಿನ್ನಲೆಯಲ್ಲಿ ಅವರನ್ನು ಭೇಟಿ ಮಾಡಿರೋದು ಸತ್ಯ ಅದರೆ ಈ ವಿಚಾರದಲ್ಲಿ ಅವರ ಕಲಾ ಬದುಕಿಗೆ ತೊಂದರೆಯನ್ನುಂಟು ಮಾಡುವ ಪ್ರಯತ್ನ ನಡೆದಿದೆ ಎಂದಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…