ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹ ಮಾಡಿದ್ದಾರೆ.
ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ಧರಾಮಯ್ಯ ಪ್ರಕರಣದ ತನಿಖೆ ಮಾಡುವಂತೆ ಒತ್ತಾಯಿಸಿದ್ದರು, ಇದೀಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆಯಾದ ಬಳಿಕ ಫಾಸಿಲ್, ಜಲೀಲ್ ಮತ್ತು ಮಸೂದ್ ಕೊಲೆಯಾಗಿದೆ. ಆದರೆ ಆಗಿನ ಬಿಜೆಪಿ ಸರಕಾರ ಈ ಕುಟುಂಬಗಳಿಗೆ ಪರಿಹಾರ ವಿತರಣೆಯಲ್ಲೂ ತಾರತಮ್ಯ ನಡೆಸಿದೆ.
ಸರಕಾರ ಈ ಮೂರೂ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ನೀಡಬೇಕು. ಪ್ರತೀ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ ನೀಡಬೇಕು. ಮೂರೂ ಕೊಲೆ ಪ್ರಕರಣವನ್ನು NIA ಅಥವಾ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಬೇಕು.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲೂ ಹಲವು ಅನುಮಾನಗಳಿವೆ, ಈ ಪ್ರಕರಣವನ್ನೂ ಮರು ತನಿಖೆ ನಡೆಸಬೇಕು. ಪ್ರವೀಣ್ ನೆಟ್ಟಾರು ಕೊಲೆಗೆ ಮೂವರ ಕೊಲೆ ಮಾಡಿರುವುದಾಗಿ ವಿ.ಎಚ್.ಪಿ ಮುಖಂಡ ಶರಣ್ ಪಂಪುವೆಲ್ ಸಾರ್ವಜನಿಕವಾಗಿ ಹೇಳಿದ್ದರು. ಅವರ ಮೇಲೆ ಈವರೆಗೂ ಪೋಲೀಸರು ಸುಮೊಟ್ಟೋ ಕೇಸು ದಾಖಲಿಸಿಲ್ಲ, ಸರಕಾರ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಯುವಜನ ಪರಿಷತ್ ಆಗ್ರಹ ಮಾಡಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…