ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಲ್ಪಸಂಖ್ಯಾತ ಯುವಕರ ಹತ್ಯೆಗೆ ಉನ್ನತ ಮಟ್ಟದ ತನಿಖೆಗೆ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹ ಮಾಡಿದ್ದಾರೆ.
ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ಧರಾಮಯ್ಯ ಪ್ರಕರಣದ ತನಿಖೆ ಮಾಡುವಂತೆ ಒತ್ತಾಯಿಸಿದ್ದರು, ಇದೀಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆಯಾದ ಬಳಿಕ ಫಾಸಿಲ್, ಜಲೀಲ್ ಮತ್ತು ಮಸೂದ್ ಕೊಲೆಯಾಗಿದೆ. ಆದರೆ ಆಗಿನ ಬಿಜೆಪಿ ಸರಕಾರ ಈ ಕುಟುಂಬಗಳಿಗೆ ಪರಿಹಾರ ವಿತರಣೆಯಲ್ಲೂ ತಾರತಮ್ಯ ನಡೆಸಿದೆ.
ಸರಕಾರ ಈ ಮೂರೂ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ನೀಡಬೇಕು. ಪ್ರತೀ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ ನೀಡಬೇಕು. ಮೂರೂ ಕೊಲೆ ಪ್ರಕರಣವನ್ನು NIA ಅಥವಾ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸಬೇಕು.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲೂ ಹಲವು ಅನುಮಾನಗಳಿವೆ, ಈ ಪ್ರಕರಣವನ್ನೂ ಮರು ತನಿಖೆ ನಡೆಸಬೇಕು. ಪ್ರವೀಣ್ ನೆಟ್ಟಾರು ಕೊಲೆಗೆ ಮೂವರ ಕೊಲೆ ಮಾಡಿರುವುದಾಗಿ ವಿ.ಎಚ್.ಪಿ ಮುಖಂಡ ಶರಣ್ ಪಂಪುವೆಲ್ ಸಾರ್ವಜನಿಕವಾಗಿ ಹೇಳಿದ್ದರು. ಅವರ ಮೇಲೆ ಈವರೆಗೂ ಪೋಲೀಸರು ಸುಮೊಟ್ಟೋ ಕೇಸು ದಾಖಲಿಸಿಲ್ಲ, ಸರಕಾರ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಯುವಜನ ಪರಿಷತ್ ಆಗ್ರಹ ಮಾಡಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…