ಪುತ್ತೂರು: ದ.ಕ. ಬಿಜೆಪಿಯ ಭೀಷ್ಮ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್(92) ಸೋಮವಾರ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಆರ್ಎಸ್ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿ ಹಲವು ಗಣ್ಯರಿಂದ ಅಂತಿಮ ದರ್ಶನ ಪಡೆದಿದ್ದು, ನಿನ್ನೆ ರಾತ್ರಿ ಸಂಸದ ನಳಿನ್ ಕಟೀಲ್, ಎಸ್.ಅಂಗಾರ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಸಂಘ ಪರಿವಾರದ ಮುಖಂಡರು ಭಾಗಿಯಾಗಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ರಾಮ್ ಭಟ ಅವರಂತಹ ದಿಗ್ಗಜರಿಗೆ ವಿಶೇಷ ಸ್ಥಾನಮಾನವಿದೆ. ಅವರ ಕರ್ನಾಟಕದಲ್ಲಿ ಬಿಜೆಪಿಯನ್ನು ಬಲಪಡಿಸಲು ಶ್ರಮಿಸಿದವರು ಮತ್ತು ಜನರೊಂದಿಗೆ ದಣಿವಿಲ್ಲದೆ ಸೇವೆ ಸಲ್ಲಿಸಿದವರು. ಅವರ ನಿಧನದಿಂದ ದುಖಃವಾಗಿದೆ ಓಂ ಶಾಂತಿ ಎಂದು ಬರೆದುಕೋಂದಿದ್ದಾರೆ.
ಇನ್ನು ರಾಮ್ ಭಟ್ ವಯೋಸಹಜ ಆನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಜನಸಂಘದ ಪ್ರಭಾವಿ ನಾಯಕರಾಗಿ ರಾಮ ಭಟ್ ಗುರಿತಿಸಿಕೊಂಡಿದ್ದರು. ಪಕ್ಷ ಸಂಘಟನೆಯಲ್ಲಿ ಪ್ರಮುಖರಾಗಿದ್ದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…