Featured

ಪುತ್ತೂರು : ನಾಗರ ಹಾವು ಕಡಿತಕ್ಕೊಳಗಾದ ತಾಯಿಗೆ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿದ ಮಗಳು – Vishwanews24

ಪುತ್ತೂರು : ನಾಗರ ಹಾವು ಕಡಿತಕ್ಕೊಳಗಾದ ತಾಯಿಗೆ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿದ ಮಗಳು

ಪುತ್ತೂರು : ನಾಗರ ಹಾವು ಕಡಿತಕ್ಕೊಳಗಾದ ತಾಯಿಗೆ ಪುತ್ರಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಿದ ಅಪರೂಪದ ಪ್ರಸಂಗ ಪುತ್ತೂರಿನ ಕೆಯ್ಯೂರಿನಲ್ಲಿ ನಡೆದಿದೆ.

ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿನಿ, ಸ್ಕೌಟ್ಸ್ ಮತ್ತು ಗೈಡ್ಸ್ ರೇಂಜರ್‍ ಶ್ರಮ್ಯಾ ರೈ ತಾಯಿಯನ್ನು ರಕ್ಷಿಸಿದ ಮಗಳು. ಕಳೆದೈದು ದಿನಗಳ ಹಿಂದೆ ಈಕೆಯ ತಾಯಿಗೆ ನಾಗರಹಾವು ಕಡಿದಿದ್ದು, ಕೂಡಲೇ ಪುತ್ರಿ ಶ್ರಮ್ಯಾ ತಮ್ಮ ಬಾಯಿಯಿಂದ ವಿಷವನ್ನು ಹೀರಿ ತೆಗೆದು ತಾಯಿಯನ್ನು ರಕ್ಷಿಸಿದ್ದಾರೆ.

ಏನಿದು ಘಟನೆ?
ಶ್ರಮ್ಯಾಳ ತಾಯಿ ಮನೆ ಕೆಯ್ಯೂರಿನ ತಮ್ಮ ಮನೆಯ ಸಮೀಪವೇ ಇದ್ದು, ಅಲ್ಲಿಗೆ ಶ್ರಮ್ಯಾ ಹಾಗೂ ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯೆಯಾಗಿರುವ ಆಕೆಯ ತಾಯಿ ಮಮತಾ ರೈ ಹೋಗಿದ್ದರು. ಮನೆಯಲ್ಲಿ ಪಂಪ್ ಸ್ವಿಚ್ ಹಾಕುವುದಕ್ಕೆಂದು ಮಮತಾ ಅವರು ತೋಟಕ್ಕೆ ಹೋಗಿದ್ದಾರೆ. ಸ್ವಿಚ್ ಹಾಕಿ ತೋಟದಿಂದ ವಾಪಸ್ಸಾಗುವಾಗ ಕೆರೆಯ ಬಳಿ ನಾಗರಹಾವು ಇರುವುದು ಗೊತ್ತಾಗದೇ ಅದನ್ನು ತುಳಿದಿದ್ದಾರೆ. ಈ ವೇಳೆ ಹಾವು ಅವರಿಗೆ ಕಚ್ಚಿದೆ. ಕೂಡಲೇ ಮನೆಗೋಡಿ ಬಂದ ಮಮತಾ ರೈ, ವಿಷ ಮೇಲೇರದಂತೆ ಕೆಲಸದಾಳಿನ ಸಹಾಯದಿಂದ ಆ ಜಾಗಕ್ಕೆ ಬೈ ಹುಲ್ಲು ಕಟ್ಟಿದ್ದಾರೆ. ಆದರೆ ಇದು ಪ್ರಯೋಜನವಾಗದು ಎಂದು ಅರಿತುಕೊಂಡ ಶ್ರಮ್ಯಾ ಸಮಯಪ್ರಜ್ಞೆ ಮೆರೆದು ಹಾವು ಕಚ್ಚಿದ ಸ್ಥಳಕ್ಕೆ ತಮ್ಮ ಬಾಯಿಯೂರಿ ಹೀರಿ ವಿಷ ತೆಗೆದಿದ್ದಾರೆ.

ಶ್ರಮ್ಯಾಳ ಪ್ರಥಮ ಚಿಕಿತ್ಸೆ ಬಳಿಕ ಮಮತಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ವೈದ್ಯರು ಕೂಡಾ ವಿಷ ತೆಗೆದಿದ್ದು ಒಳ್ಳೆಯದಾಯಿತು, ಪ್ರಾಣಕ್ಕೆ ಯಾವುದೇ ಅಪಾಯ ಇಲ್ಲ ಎಂದಿದ್ದಾರೆ. ಮಗಳ ಸಮಯಪ್ರಜ್ಞೆ ತಾಯಿಯ ಜೀವ ಕಾಪಾಡಿರುವುದಕ್ಕೆ ಶ್ರಮ್ಯಾಳಿಗೆ ಪ್ರಶಂಸೆ ವ್ಯಕ್ತವಾಗಿದೆ.

ಇನ್ನು ಈ ವಿಚಾರವಾಗಿ ಮಾತನಾಡಿದ ಶ್ರಮ್ಯಾ, ಬೈಹುಲ್ಲು ಕಟ್ಟಿದರೆ ವಿಷ ಏರುವುದಿಲ್ಲ ಎಂಬುದರಲ್ಲಿ ನನಗೆ ವಿಶ್ವಾಸ ಇರಲಿಲ್ಲ. ಹೀಗಾಗಿ ಸಿನಿಮಾಗಳಲ್ಲಿ ನೋಡಿದ, ಇತತರಿಂದ ಕೇಳಿದ ಅನುಭವಗಳ ಮೇರೆಗೆ ನಾನೇ ಬಾಯಿಯೂರಿ ವಿಷ ಹೀರಿ ತೆಗೆದೆ ಎಂದಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

9 minutes ago

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ – vishwanews24

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…

16 minutes ago

ಎಸ್‌ ಎಸ್‌ ಎಲ್‌ ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ – vishwanews24

ಎಸ್‌ಎಸ್‌ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…

1 hour ago

ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ,  ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …

2 hours ago

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ   ಉಡುಪಿ : 2026 ನೇ ಸಾಲಿನ…

2 hours ago

ಉಡುಪಿ: ಯುವತಿ ನಾಪತ್ತೆ – vishwanews24

ಉಡುಪಿ: ಯುವತಿ ನಾಪತ್ತೆ      ಉಡುಪಿ: ಕುಂದಾಪುರ ತಾಲೂಕು ಅಂಪಾರು ಗ್ರಾಮದ ಬರ್ಲಾಡಿ ನಿವಾಸಿ ಜಯಶ್ರೀ (27) ಎಂಬ ಯುವತಿಯು ಏಪ್ರಿಲ್…

2 hours ago