ಪುತ್ತೂರು: ಚುನಾವಣೆಯ ಫಲಿತಾಂಶದ ಬಳಿಕ ಅಣ್ಣಾಮಲೈ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜೀ ಸಂಪರ್ಕಿಸಿದ್ದಾರೆ. ಇದೆಲ್ಲಾ ಸರಿಯಾಗಬೇಕೆನ್ನುವ ನಿಟ್ಟಿನಲ್ಲಿ ಮಾತನಾಡಿದ್ದಾರೆ. ನಾವು ಹಿಂದೆಯೂ, ಇಂದೂ, ಮುಂದೆಯೂ ಬಿಜೆಪಿಯೇ ಎಂದು ಪುತ್ತೂರಿನಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರು ತಿಳಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನರೇಂದ್ರ ಮೋದಿಯವರ ಆದರ್ಶದ ಜೊತೆಗೆ ರಾಜಕಾರಣದಲ್ಲಿದ್ದೇವೆ. ತಪ್ಪು ಯಾರಿಂದಾಗಿದ್ದು ಎಂದು ಇಡೀ ಜಿಲ್ಲೆಯ ಜನತೆಗೆ ಗೊತ್ತಿದೆ. ಈಗಿನ ಸನ್ನಿವೇಶ ಮುಂದಿನ ದಿನಗಳಲ್ಲಿ ಸರಿಯಾಗುವ ನಿರೀಕ್ಷೆಯಿದೆ. ಪುತ್ತೂರಿನ ವಿದ್ಯಾಮಾನಗಳು ಇಡೀ ರಾಜ್ಯಕ್ಕೊಂದು ಸಂದೇಶವಾಗಿದೆ ಎಂದರು.
ಸಂಘಟನೆ ತೆಗೆದುಕೊಳ್ಳುವ ತೀರ್ಮಾನ ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಸಂದರ್ಭ, ಸನ್ನಿವೇಶಕ್ಕನುಗುಣವಾಗಿ ತೀರ್ಮಾನ ಪ್ರಕಟಿಸುತ್ತೇವೆ ಎಂದು ಪುತ್ತೂರಿನಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …