ಪುತ್ತೂರು: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವನ್ನಪ್ಪಿದ ಘಟನೆ ಕಣ್ಣೂರಿನ ಕಡಂಬೆರಿಯಲ್ಲಿ ನಡೆದಿದೆ.
ಪುತ್ತೂರಿನ ಹಿರೇಬಂಡಾಡಿಯ ನಿವಾಸಿ ಮಹಮ್ಮದ್ ಅಝೀಮ್ (21) ಮೃತ ಯುವಕ ಎಂದು ಗುರುತಿಸಲಾಗಿದೆ.
ಕಣ್ಣೂರಿನ ಕಡಂಬೆರಿಯಲ್ಲಿ ಈಜಲೆಂದು ತೆರಳಿದ್ದ ವೇಳೆ ಈ ದುರಂತ ನಡೆದಿದೆ. ಪುತ್ತೂರಿನಿಂದ ಐವರು ಸ್ನೇಹಿತರು ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದರು.
ಈ ವೇಳೆ ಈಜಲೆಂದು ನೀರಿಗಿಳಿದ ಮಹಮ್ಮದ್ ಅಝೀಮ್ ನೀರಿನ ಆಳ ತಿಳಿಯದೆ ಈಜಲು ಆಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
ಮಹಮ್ಮದ್ ಅಝೀಮ್ ಗೆ ಸರಿಯಾಗಿ ಈಜು ಬಾರದೇ ಸಾವನ್ನಪ್ಪಿದ್ದರೆ, ಇನ್ನೊಬ್ಬನನ್ನು ಡಡಂಬೆರಿಯ ಸ್ಥಳೀಯ ನಿವಾಸಿಗಳು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…