Featured

ಪುತ್ತೂರು :  ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ – ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..! Vishwanews24

ಪುತ್ತೂರು :  ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ – ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..!

ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ಪುತ್ತಿಲ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬುಧವಾರ ನಡೆದ ಬೃಹತ್ ಸಭೆಯಲ್ಲಿ ತೀವ್ರ ಒತ್ತಾಯ ಅಭಿಮಾನಿ, ಹಿಂದೂ ಕಾರ್ಯಕರ್ತರಿಂದ ಬಂದಿತ್ತು.

ಪುತ್ತಿಲರವರು ತಮ್ಮ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಎರಡು ದಿನದಲ್ಲಿ ತಮ್ಮ ಸ್ಪಷ್ಟ ನಿಲುವುವನ್ನು ತಿಳಿಸುತ್ತೇನೆ ಎಂದಿದ್ದರು. ಇದೀಗ ಪುತ್ತಿಲರವರು ಪುತ್ತೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಈ ಹಿನ್ನೆಲೆಯಲ್ಲಿ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರಿನಿಂದ ಕಣಕ್ಕಿಳಿಯಲು ಅರುಣ್ ಕುಮಾರ್ ಪುತ್ತಿಲ ನಿರ್ಧರಿಸಿದ್ದು, ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ಪುತ್ತೂರಿನಲ್ಲಿ ಅರುಣ್ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು.

ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವ ನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರ ಪರವಾಗಿ ಕಾರ್ಯ ನಿರ್ವಹಿಸಲು ಸಾವಿರಾರು ಕಾರ್ಯಕರ್ತರು ಉತ್ಸುಕರಾಗಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago