ಪುತ್ತೂರು: ಪಾನಮತ್ತನಾಗಿದ್ದಂತ ಪ್ರಯಾಣಿಕನೊಬ್ಬ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ತನ್ನೂರಿಗೆ ತೆರಳೋದಕ್ಕೆ ಹೋದಂತ ಸಂದರ್ಭದಲ್ಲಿ, ಆತನ ಮೇಲೆ ಹಲ್ಲೆ ನಡೆಸಿ, ಹೊರಗೆ ಕಾಲಿನಿಂದ ಒದ್ದು ನಿರ್ವಾಹಕ ತಳ್ಳಿದ್ದರು. ಇದರಿಂದಾಗಿ ಅಂಗಾತವಾಗಿ ಬಸ್ ಡೋರಿನಿಂದ ಹೊರಗೆ ಬಿದ್ದಂತ ಪ್ರಯಾಣಿಕ ಗಾಯಗೊಂಡಿದ್ದನು.
ಈ ಘಟನೆಯ ಹಿನ್ನಲೆಯಲ್ಲಿ ನಿರ್ವಾಹಕನನ್ನು ಅಮಾನತುಗೊಳಿಸಿ, ಸಾರಿಗೆ ನಿಗಮ ಆದೇಶಿಸಿದೆ.
ಕಂಡಕ್ಟರ್ ಮಾತಿಗೆ ಒಪ್ಪದಂತ ಪಾನಮತ್ತ ಪ್ರಯಾಣಿಕ ಮಾತ್ರ ಬಸ್ಸಿನಿಂದ ಇಳಿದಿಲ್ಲ. ಈ ವೇಳೆಗೆ ಸಿಟ್ಟುಗೊಂಡಂತ ನಿರ್ವಾಹಕ ಆತನ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಬಸ್ಸಿನ ಡೋರಿನಿಂದ ಕಾಲಿನಿಂದ ಒದ್ದಿದ್ದಾನೆ. ಆಗ ಪಾನಮತ್ತ ಪ್ರಯಾಣಿಕ ರಸ್ತೆಗೆ ಅಂಗಾತ ಬಿದ್ದು ಪೆಟ್ಟುಗೊಂಡಿರೋ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಪುತ್ತೂರು : ಪಾನ ಮತ್ತ ಪ್ರಯಾಣಿಕೋರ್ವನಿಗೆ ಕಾಲಿನಿಂದ ಒದ್ದು ಹೊರದಬ್ಬಿದ KSRTC ಕಂಡಕ್ಟರ್..
ಈ ವಿಷಯ ತಿಳಿದಂತ ರೈತ ಸಂಘದ ಜಿಲ್ಲಾಧ್ಯಕ್ಷ ಅಮರನಾಥ ಆಳ್ವ, ಸಾರಿಗೆ ಬಸ್ ನಿರ್ವಾಹಕನ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಸಂಬಂಧ ಪಟ್ಟಂತ ಅಧಿಕಾರಿಗಳು ಈ ನಡೆ ತೋರಿದಂತ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಈ ಬೆನ್ನಲ್ಲೇ ಕೆ ಎಸ್ ಆರ್ ಟಿಸಿಯಿಂದ ಚಾಲಕ ಕಂ ನಿರ್ವಾಹಕ ಸುಖರಾಜ ರೈ ಎಂ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಅಲ್ಲದೇ ನಿಗಮದ ಚಾಲನಾ ಸಿಬ್ಬಂದಿಗಳಿಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ನಿರಂತರ ತರಬೇತಿ ಹಾಗೂ ತಿಳುವಳಿಕೆ ನೀಡಿದ್ದಾಗ್ಯೂ ಸಹ ಈ ರೀತಿಯ ಘಟನೆ ನಡೆದಿರುವುದು ದುಃಖದ ಸಂಗತಿಯಾಗಿದೆ ಎಂದಿದೆ.
ನಿಗಮದ ಸಿಬ್ಬಂದಿಗಳಿಗೆ ಇನ್ನೂ ಹೆಚ್ಛಿನ ತರಬೇತಿ ನೀಡಿ ಪ್ರಯಾಣಿಕರೊಡನೆ ಸೌಜನ್ಯವಾಗಿ ವರ್ತಿಸುವ ಸಂಬಂಧ ಕ್ರಮಕೈಗೊಳ್ಳಲಾಗುವುದು ಹಾಗೂ ಈ ರೀತಿಯ ಘಟನೆಗಳಿಗೆ ಕಾರಣರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿದೆ. ಸದರಿ ಪ್ರಯಾಣಿಕರ ವೈದ್ಯಕೀಯ ವೆಚ್ಚವನ್ನು ನಿಗಮವು ಭರಿಸಲಿದೆ ಎಂದು ಹೇಳಿದೆ.
ಉಡುಪಿ :ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – Vishwanews24
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…