ಪುತ್ತೂರು: ಪಾನಮತ್ತನಾಗಿದ್ದಂತ ಪ್ರಯಾಣಿಕನೊಬ್ಬ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ತನ್ನೂರಿಗೆ ತೆರಳೋದಕ್ಕೆ ಹೋದಂತ ಸಂದರ್ಭದಲ್ಲಿ, ಆತನ ಮೇಲೆ ಹಲ್ಲೆ ನಡೆಸಿ, ಹೊರಗೆ ಕಾಲಿನಿಂದ ಒದ್ದು ನಿರ್ವಾಹಕ ತಳ್ಳಿದ್ದರು. ಇದರಿಂದಾಗಿ ಅಂಗಾತವಾಗಿ ಬಸ್ ಡೋರಿನಿಂದ ಹೊರಗೆ ಬಿದ್ದಂತ ಪ್ರಯಾಣಿಕ ಗಾಯಗೊಂಡಿದ್ದನು.
ಈ ಘಟನೆಯ ಹಿನ್ನಲೆಯಲ್ಲಿ ನಿರ್ವಾಹಕನನ್ನು ಅಮಾನತುಗೊಳಿಸಿ, ಸಾರಿಗೆ ನಿಗಮ ಆದೇಶಿಸಿದೆ.
ಕಂಡಕ್ಟರ್ ಮಾತಿಗೆ ಒಪ್ಪದಂತ ಪಾನಮತ್ತ ಪ್ರಯಾಣಿಕ ಮಾತ್ರ ಬಸ್ಸಿನಿಂದ ಇಳಿದಿಲ್ಲ. ಈ ವೇಳೆಗೆ ಸಿಟ್ಟುಗೊಂಡಂತ ನಿರ್ವಾಹಕ ಆತನ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಬಸ್ಸಿನ ಡೋರಿನಿಂದ ಕಾಲಿನಿಂದ ಒದ್ದಿದ್ದಾನೆ. ಆಗ ಪಾನಮತ್ತ ಪ್ರಯಾಣಿಕ ರಸ್ತೆಗೆ ಅಂಗಾತ ಬಿದ್ದು ಪೆಟ್ಟುಗೊಂಡಿರೋ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಪುತ್ತೂರು : ಪಾನ ಮತ್ತ ಪ್ರಯಾಣಿಕೋರ್ವನಿಗೆ ಕಾಲಿನಿಂದ ಒದ್ದು ಹೊರದಬ್ಬಿದ KSRTC ಕಂಡಕ್ಟರ್..
ಈ ವಿಷಯ ತಿಳಿದಂತ ರೈತ ಸಂಘದ ಜಿಲ್ಲಾಧ್ಯಕ್ಷ ಅಮರನಾಥ ಆಳ್ವ, ಸಾರಿಗೆ ಬಸ್ ನಿರ್ವಾಹಕನ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಸಂಬಂಧ ಪಟ್ಟಂತ ಅಧಿಕಾರಿಗಳು ಈ ನಡೆ ತೋರಿದಂತ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಈ ಬೆನ್ನಲ್ಲೇ ಕೆ ಎಸ್ ಆರ್ ಟಿಸಿಯಿಂದ ಚಾಲಕ ಕಂ ನಿರ್ವಾಹಕ ಸುಖರಾಜ ರೈ ಎಂ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಅಲ್ಲದೇ ನಿಗಮದ ಚಾಲನಾ ಸಿಬ್ಬಂದಿಗಳಿಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ನಿರಂತರ ತರಬೇತಿ ಹಾಗೂ ತಿಳುವಳಿಕೆ ನೀಡಿದ್ದಾಗ್ಯೂ ಸಹ ಈ ರೀತಿಯ ಘಟನೆ ನಡೆದಿರುವುದು ದುಃಖದ ಸಂಗತಿಯಾಗಿದೆ ಎಂದಿದೆ.
ನಿಗಮದ ಸಿಬ್ಬಂದಿಗಳಿಗೆ ಇನ್ನೂ ಹೆಚ್ಛಿನ ತರಬೇತಿ ನೀಡಿ ಪ್ರಯಾಣಿಕರೊಡನೆ ಸೌಜನ್ಯವಾಗಿ ವರ್ತಿಸುವ ಸಂಬಂಧ ಕ್ರಮಕೈಗೊಳ್ಳಲಾಗುವುದು ಹಾಗೂ ಈ ರೀತಿಯ ಘಟನೆಗಳಿಗೆ ಕಾರಣರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿದೆ. ಸದರಿ ಪ್ರಯಾಣಿಕರ ವೈದ್ಯಕೀಯ ವೆಚ್ಚವನ್ನು ನಿಗಮವು ಭರಿಸಲಿದೆ ಎಂದು ಹೇಳಿದೆ.
ಉಡುಪಿ :ಸೆ. 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…