Featured

ಪುತ್ತೂರು : ಪಾನ ಮತ್ತ ಪ್ರಯಾಣಿಕೋರ್ವನಿಗೆ ಕಾಲಿನಿಂದ ಒದ್ದು ಹೊರದಬ್ಬಿದ KSRTC ಕಂಡಕ್ಟರ್ ; ಬಸ್ ನಿರ್ವಾಹಕನನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರ ಒತ್ತಾಯ – Vishwanews24

ಪುತ್ತೂರು : ಪಾನ ಮತ್ತ ಪ್ರಯಾಣಿಕೋರ್ವನಿಗೆ ಕಾಲಿನಿಂದ ಒದ್ದು ಹೊರದಬ್ಬಿದ KSRTC ಕಂಡಕ್ಟರ್ ; ಬಸ್ ನಿರ್ವಾಹಕನನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

ಪುತ್ತೂರು : ಪುತ್ತೂರಿನಿಂದ ಈಶ್ವರಮಂಗಲ ಮಾರ್ಗವಾಗಿ ಸುಳ್ಯ ಪದವು ಕಡೆಗೆ ಸಂಜೆ ಬರುತ್ತಿದ್ದ ಸರಕಾರಿ ಬಸ್ ಗೆ ಹತ್ತಲೆತ್ನಿಸಿದ ಪಾನ ಮತ್ತ ಪ್ರಯಾಣಿಕೋರ್ವನಿಗೆ ನಿರ್ವಾಹಕ ಮೆಟ್ಟಿಲಲ್ಲೇ ತಡೆದು ಕೈಯಿಂದ ಹಲ್ಲೆ ನಡೆಸಿ ಕಾಲಿನಿಂದ ಒದ್ದು ಹಾಕಿದ ಘಟನೆ ಸೆ.೦7 ರ ಬುಧವಾರ ಸಂಜೆ ಈಶ್ವರ ಮಂಗಲ ಪೇಟೆಯಲ್ಲಿ ನಡೆದಿದೆ.

ಸಂಜೆ ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಕೃಷ್ಣಪ್ಪ ಎಂಬವರು ಪದಡ್ಕ ಹೋಗಲು ಬಸ್ಸನ್ನು ಹತ್ತಿದ್ದು, ಮದ್ಯಪಾನ ಮಾಡಿರುವುದನ್ನು ಗಮನಿಸಿದ ನಿರ್ವಾಹಕ ಸುಖ್ ರಾಜ್ ರೈ , ಪ್ರಯಾಣಿಕ ಕೃಷ್ಣಪ್ಪ ರವರನ್ನು ಕೈಯಿಂದ ದೂಡಿ ಕೈಯಲ್ಲಿದ್ದ ಕೊಡೆ ಮತ್ತಿತರ ವಸ್ತುಗಳನ್ನು ಕಸಿದು ಹೊರಕ್ಕೆ ಎಸೆದಿದ್ದಾನೆ. ಬಳಿಕ ಕಪಾಳಕ್ಕೆ ಬಾರಿಸಿ , ಹಲ್ಲೆ ನಡೆಸಿ ಕಾಲಿನಿಂದ ಒದ್ದಿರುವುದರಿಂದ ಪ್ರಯಾಣಿಕ ಕೃಷ್ಣಪ್ಪ ಕೆಳಗೆ ರಸ್ತೆಗೆ ಬಿದ್ದಿದ್ದಾರೆ. ಹೊರಳಾಡುತ್ತಾ ಬಿದ್ದಿರುವ ಕೃಷ್ಣಪ್ಪರನ್ನು ನಿರ್ವಾಹಕ ಹಾಗೆ ಬಿಟ್ಟು ತೆರಳಿದ ತೆರಳಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬಂಟ್ವಾಳ ‌: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು – Vishwanews24

ಈ ವಿಷಯ ತಿಳಿದ ರೈತ ಸಂಘದ ಜಿಲ್ಲಾಧ್ಯಕ್ಷ ಅಮರನಾಥ ಆಳ್ವ ಸರಕಾರಿ ಬಸ್ ನ ಪುತ್ತೂರು ಘಟಕವನ್ನು ಸಂಪರ್ಕಿಸಿ ಬಸ್ಸು ನಿರ್ವಾಹಕನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕೃತ್ಯದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದ್ದು ಕೃತ್ಯಕ್ಕೆ ಕಾರಣರಾದ ಬಸ್ ನಿರ್ವಾಹಕನನ್ನು ಅಮಾನತುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವೈರಲ್ ಆದ ವಿಡಿಯೋ ಗಮನಿಸಿ, ಪ್ರಯಾಣಿಕರ ಮೇಲೆ ಕೈ ಮಾಡುವ ತುಳಿಯುವ ಅಧಿಕಾರ ನಿರ್ವಾಹಕರಿಗಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿ ನಿರ್ವಾಹಕನನ್ನು ಅಮಾನತು ಮಾಡುತ್ತಿದ್ದೇವೆ. ಇದು ಅಕ್ಷಮ್ಯವಾಗಿದ್ದು ಈ ರೀತಿಯ ಘಟನೆ ನಡೆಯಬಾರದಿತ್ತು ಎಂದು ಕೆ ಎಸ್ ಆರ್ ಟಿಸಿ ಪುತ್ತೂರು ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.

ಉಡುಪಿ: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ – Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

13 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

14 hours ago