Featured

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು – vishwanews24

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು

ಬಿಜೆಪಿಯಿಂದ ಸಕಾರಾತ್ಮಕ ಸ್ಪಂದನೆ ದೊರೆಯದಿದ್ದಲ್ಲಿ ಪುತ್ತಿಲ ಪರಿವಾರ ರಾಜಕೀಯ ಕ್ಷೇತ್ರಕ್ಕೆ ಕಾಲಿಡಲಿದೆ : ಸಮಾಲೋಚನೆ ಸಭೆಯಲ್ಲಿ ಘೋಷಣೆ

ನಾನು ಮಾತೃಪಕ್ಷಕ್ಕೆ ಬರಲು ಸಿದ್ಧ. ನನಗೆ ಅಧಿಕಾರದ ಆಸೆ ಇಲ್ಲ. ನನ್ನ ಜತೆಗಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಾನಮಾನ ನೀಡಬೇಕು : ಪುತ್ತಿಲ

ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ದ.ಕ. ಕ್ಷೇತ್ರದಿಂದ ಅರುಣ್‌ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್‌ ನೀಡಬೇಕು : ಕಾರ್ಯಕರ್ತರ ಆಗ್ರಹ

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು ನೀಡಲಾಗುವುದು. ಸಕಾರಾತ್ಮಕ ಸ್ಪಂದನೆ ದೊರೆಯದಿದ್ದಲ್ಲಿ ಪುತ್ತಿಲ ಪರಿವಾರವು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲಿದೆ ಎಂದು ಪುತ್ತೂರಿನಲ್ಲಿ ನಡೆದ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯಲ್ಲಿ ಘೋಷಿಸಲಾಗಿದೆ.

ನಗರದ ಕೊಟೇಚಾ ಸಭಾಂಗಣದಲ್ಲಿ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯು ಫೆ.5ರಂದು ನಡೆಯಿತು. ಪುತ್ತಿಲ ಪರಿವಾರದ ಪರವಾಗಿ ಮಾತನಾಡಿದ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಸಾಮಾನ್ಯ ಕಾರ್ಯ ಕರ್ತರಾಗಿ ಅರುಣ್‌ಕುಮಾರ್‌ ಬಿಜೆಪಿ ಸೇರಬೇಕು ಎನ್ನುವುದನ್ನು ಯಾವುದೇ ಕಾರ್ಯಕರ್ತರು ಒಪ್ಪುವುದಿಲ್ಲ. ಅರುಣ್‌ 35 ವರ್ಷಗಳಿಗೂ ಅಧಿಕ ಕಾಲದಿಂದ ಅಧಿಕಾರದ ಆಸೆ ಇಲ್ಲದೆ ಸಂಘಟನೆ, ಪಕ್ಷಕ್ಕಾಗಿ ದುಡಿದವರು. ಹಾಗಾಗಿ ಷರತ್ತು ಬದಿಗಿಟ್ಟು ಅವರಿಗೆ ಕಾರ್ಯಕರ್ತರ ಅಪೇಕ್ಷೆಯಂತೆ ಸ್ಥಾನಮಾನ ನೀಡಬೇಕು ಎಂದರು.

ಕಾರ್ಯಕರ್ತರ ಅಪೇಕ್ಷೆಗೆ ಬದ್ಧ

ಅರುಣ್‌ ಪುತ್ತಿಲ ಮಾತನಾಡಿ, ಪುತ್ತಿಲ ಪರಿವಾರ ಮತ್ತು ಬಿಜೆಪಿ ಒಂದಾಗುವ ನಿಟ್ಟಿನಲ್ಲಿ ಎರಡು 3 ಬಾರಿ ಮಾತುಕತೆ ನಡೆದಿತ್ತು. ರಾಜ್ಯದ ನಾಯಕರು ಮನಸ್ಸು ಮಾಡಿದ್ದರೂ ಪುತ್ತೂರಿನ ಕೆಲವರು ವಿರೋಧಿಸುತ್ತಿದ್ದಾರೆ. ಅವರಿಗೆ ನರೇಂದ್ರ ಮೋದಿ ಹಾಗೂ ದೇಶದ ಹಿತಕ್ಕಿಂತ ಗೊಂದಲವೇ ಮುಖ್ಯವಾಗಿದೆ ಎಂದರು.

ನಾನು ಮಾತೃಪಕ್ಷಕ್ಕೆ ಬರಲು ಸಿದ್ಧ. ನನಗೆ ಅಧಿಕಾರದ ಆಸೆ ಇಲ್ಲ. ನನ್ನ ಜತೆಗಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಾನಮಾನ ನೀಡಬೇಕು ಎಂದ ಪುತ್ತಿಲ, ವಿಧಾನಸಭಾ ಚುನಾ ವಣೆಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಎಂದು ಕೆಲವರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಆರೋಪ ಮಾಡಿದವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಡೆಯಲ್ಲಿ ನಿಂತು ಈ ಮಾತನ್ನು ಹೇಳಲಿ ಸವಾಲೆಸೆದರು.

ಪುತ್ತಿಲಗೆ ಎಂ.ಪಿ.ಟಿಕೆಟ್‌ ನೀಡಿ

ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ದ.ಕ. ಕ್ಷೇತ್ರದಿಂದ ಅರುಣ್‌ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್‌ ನೀಡಬೇಕು. ಒಂದೊಮ್ಮೆ ಬಿಜೆಪಿ ಸೇರ್ಪಡೆಗೆ ಅವಕಾಶ ಸಿಗದಿದ್ದರೆ ಪುತ್ತಿಲ ಪರಿವಾರದ ಮೂಲಕ ಅರುಣ್‌ ಕುಮಾರ್‌ ಲೋಕಸಭಾ ಚುನಾವಣೆಯ ಕಣಕ್ಕಿಳಿಯಬೇಕು ಎಂದು ಸಭೆಯಲ್ಲಿದ್ದ ಕಾರ್ಯಕರ್ತರು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಅರುಣ್‌, ನಿಮ್ಮ ಅಪೇಕ್ಷೆಯಂತೆ ನಡೆದುಕೊಳ್ಳುವೆ ಎಂದು ಘೋಷಿಸಿದರು.

ಯಡಿಯೂರಪ್ಪ ಪಕ್ಷ ತೊರೆಯಲಿಲ್ಲವೇ?

ಯಡಿಯೂರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ ಮೊದಲಾದವರು ಬಿಜೆಪಿ ತೊರೆದು ಚುನಾವಣೆಗೆ ಸ್ಪರ್ಧಿಸಿ ದ್ದರು. ಅವರಿಗೆಲ್ಲ ಮತ್ತೆ ಅವಕಾಶ ಸಿಕ್ಕಿದೆ. ಯಡಿಯೂರಪ್ಪನವರ ಪುತ್ರನಿಗೆ ರಾಜ್ಯಾಧ್ಯಕ್ಷತೆ ಸಿಕ್ಕಿದೆ. ಹಾಗಿರುವಾಗ ಅರುಣ್‌ ಪುತ್ತಿಲ ಮಾತ್ರ ಬರಬಾರದು ಅಂದರೆ ಏನರ್ಥ ಎಂದು ಶ್ರೀ ಕೃಷ್ಣ ಉಪಾಧ್ಯಾಯರು ಪ್ರಶ್ನಿಸಿದರು.

ಪುತ್ತಿಲ ಪರಿವಾರದ ಶಶಾಂಕ್‌ ಕೊಟೇಚಾ, ಪ್ರಸನ್ನ ಮಾರ್ಥ, ಉಮೇಶ್‌ ಕೋಡಿಬೈಲು, ಮನೀಶ್‌ ಕುಲಾಲ್‌, ಮಲ್ಲಿಕಾ ಪ್ರಸಾದ್‌, ಅನಿಲ್‌, ರಾಜೇಶ್‌ ಮೊದಲಾದವರಿದ್ದರು. ರವಿ ಕುಮಾರ್‌ ರೈ ಸ್ವಾಗತಿಸಿದರು. ನವೀನ್‌ ರೈ ಪಂಜಳ ನಿರೂಪಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago