Featured

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು – vishwanews24

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು

ಬಿಜೆಪಿಯಿಂದ ಸಕಾರಾತ್ಮಕ ಸ್ಪಂದನೆ ದೊರೆಯದಿದ್ದಲ್ಲಿ ಪುತ್ತಿಲ ಪರಿವಾರ ರಾಜಕೀಯ ಕ್ಷೇತ್ರಕ್ಕೆ ಕಾಲಿಡಲಿದೆ : ಸಮಾಲೋಚನೆ ಸಭೆಯಲ್ಲಿ ಘೋಷಣೆ

ನಾನು ಮಾತೃಪಕ್ಷಕ್ಕೆ ಬರಲು ಸಿದ್ಧ. ನನಗೆ ಅಧಿಕಾರದ ಆಸೆ ಇಲ್ಲ. ನನ್ನ ಜತೆಗಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಾನಮಾನ ನೀಡಬೇಕು : ಪುತ್ತಿಲ

ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ದ.ಕ. ಕ್ಷೇತ್ರದಿಂದ ಅರುಣ್‌ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್‌ ನೀಡಬೇಕು : ಕಾರ್ಯಕರ್ತರ ಆಗ್ರಹ

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು ನೀಡಲಾಗುವುದು. ಸಕಾರಾತ್ಮಕ ಸ್ಪಂದನೆ ದೊರೆಯದಿದ್ದಲ್ಲಿ ಪುತ್ತಿಲ ಪರಿವಾರವು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲಿದೆ ಎಂದು ಪುತ್ತೂರಿನಲ್ಲಿ ನಡೆದ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯಲ್ಲಿ ಘೋಷಿಸಲಾಗಿದೆ.

ನಗರದ ಕೊಟೇಚಾ ಸಭಾಂಗಣದಲ್ಲಿ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯು ಫೆ.5ರಂದು ನಡೆಯಿತು. ಪುತ್ತಿಲ ಪರಿವಾರದ ಪರವಾಗಿ ಮಾತನಾಡಿದ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಸಾಮಾನ್ಯ ಕಾರ್ಯ ಕರ್ತರಾಗಿ ಅರುಣ್‌ಕುಮಾರ್‌ ಬಿಜೆಪಿ ಸೇರಬೇಕು ಎನ್ನುವುದನ್ನು ಯಾವುದೇ ಕಾರ್ಯಕರ್ತರು ಒಪ್ಪುವುದಿಲ್ಲ. ಅರುಣ್‌ 35 ವರ್ಷಗಳಿಗೂ ಅಧಿಕ ಕಾಲದಿಂದ ಅಧಿಕಾರದ ಆಸೆ ಇಲ್ಲದೆ ಸಂಘಟನೆ, ಪಕ್ಷಕ್ಕಾಗಿ ದುಡಿದವರು. ಹಾಗಾಗಿ ಷರತ್ತು ಬದಿಗಿಟ್ಟು ಅವರಿಗೆ ಕಾರ್ಯಕರ್ತರ ಅಪೇಕ್ಷೆಯಂತೆ ಸ್ಥಾನಮಾನ ನೀಡಬೇಕು ಎಂದರು.

ಕಾರ್ಯಕರ್ತರ ಅಪೇಕ್ಷೆಗೆ ಬದ್ಧ

ಅರುಣ್‌ ಪುತ್ತಿಲ ಮಾತನಾಡಿ, ಪುತ್ತಿಲ ಪರಿವಾರ ಮತ್ತು ಬಿಜೆಪಿ ಒಂದಾಗುವ ನಿಟ್ಟಿನಲ್ಲಿ ಎರಡು 3 ಬಾರಿ ಮಾತುಕತೆ ನಡೆದಿತ್ತು. ರಾಜ್ಯದ ನಾಯಕರು ಮನಸ್ಸು ಮಾಡಿದ್ದರೂ ಪುತ್ತೂರಿನ ಕೆಲವರು ವಿರೋಧಿಸುತ್ತಿದ್ದಾರೆ. ಅವರಿಗೆ ನರೇಂದ್ರ ಮೋದಿ ಹಾಗೂ ದೇಶದ ಹಿತಕ್ಕಿಂತ ಗೊಂದಲವೇ ಮುಖ್ಯವಾಗಿದೆ ಎಂದರು.

ನಾನು ಮಾತೃಪಕ್ಷಕ್ಕೆ ಬರಲು ಸಿದ್ಧ. ನನಗೆ ಅಧಿಕಾರದ ಆಸೆ ಇಲ್ಲ. ನನ್ನ ಜತೆಗಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಾನಮಾನ ನೀಡಬೇಕು ಎಂದ ಪುತ್ತಿಲ, ವಿಧಾನಸಭಾ ಚುನಾ ವಣೆಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಎಂದು ಕೆಲವರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಆರೋಪ ಮಾಡಿದವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಡೆಯಲ್ಲಿ ನಿಂತು ಈ ಮಾತನ್ನು ಹೇಳಲಿ ಸವಾಲೆಸೆದರು.

ಪುತ್ತಿಲಗೆ ಎಂ.ಪಿ.ಟಿಕೆಟ್‌ ನೀಡಿ

ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ದ.ಕ. ಕ್ಷೇತ್ರದಿಂದ ಅರುಣ್‌ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್‌ ನೀಡಬೇಕು. ಒಂದೊಮ್ಮೆ ಬಿಜೆಪಿ ಸೇರ್ಪಡೆಗೆ ಅವಕಾಶ ಸಿಗದಿದ್ದರೆ ಪುತ್ತಿಲ ಪರಿವಾರದ ಮೂಲಕ ಅರುಣ್‌ ಕುಮಾರ್‌ ಲೋಕಸಭಾ ಚುನಾವಣೆಯ ಕಣಕ್ಕಿಳಿಯಬೇಕು ಎಂದು ಸಭೆಯಲ್ಲಿದ್ದ ಕಾರ್ಯಕರ್ತರು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಅರುಣ್‌, ನಿಮ್ಮ ಅಪೇಕ್ಷೆಯಂತೆ ನಡೆದುಕೊಳ್ಳುವೆ ಎಂದು ಘೋಷಿಸಿದರು.

ಯಡಿಯೂರಪ್ಪ ಪಕ್ಷ ತೊರೆಯಲಿಲ್ಲವೇ?

ಯಡಿಯೂರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ ಮೊದಲಾದವರು ಬಿಜೆಪಿ ತೊರೆದು ಚುನಾವಣೆಗೆ ಸ್ಪರ್ಧಿಸಿ ದ್ದರು. ಅವರಿಗೆಲ್ಲ ಮತ್ತೆ ಅವಕಾಶ ಸಿಕ್ಕಿದೆ. ಯಡಿಯೂರಪ್ಪನವರ ಪುತ್ರನಿಗೆ ರಾಜ್ಯಾಧ್ಯಕ್ಷತೆ ಸಿಕ್ಕಿದೆ. ಹಾಗಿರುವಾಗ ಅರುಣ್‌ ಪುತ್ತಿಲ ಮಾತ್ರ ಬರಬಾರದು ಅಂದರೆ ಏನರ್ಥ ಎಂದು ಶ್ರೀ ಕೃಷ್ಣ ಉಪಾಧ್ಯಾಯರು ಪ್ರಶ್ನಿಸಿದರು.

ಪುತ್ತಿಲ ಪರಿವಾರದ ಶಶಾಂಕ್‌ ಕೊಟೇಚಾ, ಪ್ರಸನ್ನ ಮಾರ್ಥ, ಉಮೇಶ್‌ ಕೋಡಿಬೈಲು, ಮನೀಶ್‌ ಕುಲಾಲ್‌, ಮಲ್ಲಿಕಾ ಪ್ರಸಾದ್‌, ಅನಿಲ್‌, ರಾಜೇಶ್‌ ಮೊದಲಾದವರಿದ್ದರು. ರವಿ ಕುಮಾರ್‌ ರೈ ಸ್ವಾಗತಿಸಿದರು. ನವೀನ್‌ ರೈ ಪಂಜಳ ನಿರೂಪಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

13 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago