Featured

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು – vishwanews24

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು

ಬಿಜೆಪಿಯಿಂದ ಸಕಾರಾತ್ಮಕ ಸ್ಪಂದನೆ ದೊರೆಯದಿದ್ದಲ್ಲಿ ಪುತ್ತಿಲ ಪರಿವಾರ ರಾಜಕೀಯ ಕ್ಷೇತ್ರಕ್ಕೆ ಕಾಲಿಡಲಿದೆ : ಸಮಾಲೋಚನೆ ಸಭೆಯಲ್ಲಿ ಘೋಷಣೆ

ನಾನು ಮಾತೃಪಕ್ಷಕ್ಕೆ ಬರಲು ಸಿದ್ಧ. ನನಗೆ ಅಧಿಕಾರದ ಆಸೆ ಇಲ್ಲ. ನನ್ನ ಜತೆಗಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಾನಮಾನ ನೀಡಬೇಕು : ಪುತ್ತಿಲ

ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ದ.ಕ. ಕ್ಷೇತ್ರದಿಂದ ಅರುಣ್‌ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್‌ ನೀಡಬೇಕು : ಕಾರ್ಯಕರ್ತರ ಆಗ್ರಹ

ಪುತ್ತೂರು: ಪುತ್ತಿಲ ಪರಿವಾರವನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು ನೀಡಲಾಗುವುದು. ಸಕಾರಾತ್ಮಕ ಸ್ಪಂದನೆ ದೊರೆಯದಿದ್ದಲ್ಲಿ ಪುತ್ತಿಲ ಪರಿವಾರವು ರಾಜಕೀಯ ಕ್ಷೇತ್ರಕ್ಕೆ ಕಾಲಿಡಲಿದೆ ಎಂದು ಪುತ್ತೂರಿನಲ್ಲಿ ನಡೆದ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯಲ್ಲಿ ಘೋಷಿಸಲಾಗಿದೆ.

ನಗರದ ಕೊಟೇಚಾ ಸಭಾಂಗಣದಲ್ಲಿ ಪುತ್ತಿಲ ಪರಿವಾರದ ಸಮಾಲೋಚನೆ ಸಭೆಯು ಫೆ.5ರಂದು ನಡೆಯಿತು. ಪುತ್ತಿಲ ಪರಿವಾರದ ಪರವಾಗಿ ಮಾತನಾಡಿದ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಸಾಮಾನ್ಯ ಕಾರ್ಯ ಕರ್ತರಾಗಿ ಅರುಣ್‌ಕುಮಾರ್‌ ಬಿಜೆಪಿ ಸೇರಬೇಕು ಎನ್ನುವುದನ್ನು ಯಾವುದೇ ಕಾರ್ಯಕರ್ತರು ಒಪ್ಪುವುದಿಲ್ಲ. ಅರುಣ್‌ 35 ವರ್ಷಗಳಿಗೂ ಅಧಿಕ ಕಾಲದಿಂದ ಅಧಿಕಾರದ ಆಸೆ ಇಲ್ಲದೆ ಸಂಘಟನೆ, ಪಕ್ಷಕ್ಕಾಗಿ ದುಡಿದವರು. ಹಾಗಾಗಿ ಷರತ್ತು ಬದಿಗಿಟ್ಟು ಅವರಿಗೆ ಕಾರ್ಯಕರ್ತರ ಅಪೇಕ್ಷೆಯಂತೆ ಸ್ಥಾನಮಾನ ನೀಡಬೇಕು ಎಂದರು.

ಕಾರ್ಯಕರ್ತರ ಅಪೇಕ್ಷೆಗೆ ಬದ್ಧ

ಅರುಣ್‌ ಪುತ್ತಿಲ ಮಾತನಾಡಿ, ಪುತ್ತಿಲ ಪರಿವಾರ ಮತ್ತು ಬಿಜೆಪಿ ಒಂದಾಗುವ ನಿಟ್ಟಿನಲ್ಲಿ ಎರಡು 3 ಬಾರಿ ಮಾತುಕತೆ ನಡೆದಿತ್ತು. ರಾಜ್ಯದ ನಾಯಕರು ಮನಸ್ಸು ಮಾಡಿದ್ದರೂ ಪುತ್ತೂರಿನ ಕೆಲವರು ವಿರೋಧಿಸುತ್ತಿದ್ದಾರೆ. ಅವರಿಗೆ ನರೇಂದ್ರ ಮೋದಿ ಹಾಗೂ ದೇಶದ ಹಿತಕ್ಕಿಂತ ಗೊಂದಲವೇ ಮುಖ್ಯವಾಗಿದೆ ಎಂದರು.

ನಾನು ಮಾತೃಪಕ್ಷಕ್ಕೆ ಬರಲು ಸಿದ್ಧ. ನನಗೆ ಅಧಿಕಾರದ ಆಸೆ ಇಲ್ಲ. ನನ್ನ ಜತೆಗಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸ್ಥಾನಮಾನ ನೀಡಬೇಕು ಎಂದ ಪುತ್ತಿಲ, ವಿಧಾನಸಭಾ ಚುನಾ ವಣೆಯಲ್ಲಿ ಕೋಟಿ ಕೋಟಿ ಹಣ ಪಡೆದಿದ್ದಾರೆ ಎಂದು ಕೆಲವರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಆರೋಪ ಮಾಡಿದವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಡೆಯಲ್ಲಿ ನಿಂತು ಈ ಮಾತನ್ನು ಹೇಳಲಿ ಸವಾಲೆಸೆದರು.

ಪುತ್ತಿಲಗೆ ಎಂ.ಪಿ.ಟಿಕೆಟ್‌ ನೀಡಿ

ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ದ.ಕ. ಕ್ಷೇತ್ರದಿಂದ ಅರುಣ್‌ ಪುತ್ತಿಲ ಅವರಿಗೆ ಬಿಜೆಪಿ ಟಿಕೆಟ್‌ ನೀಡಬೇಕು. ಒಂದೊಮ್ಮೆ ಬಿಜೆಪಿ ಸೇರ್ಪಡೆಗೆ ಅವಕಾಶ ಸಿಗದಿದ್ದರೆ ಪುತ್ತಿಲ ಪರಿವಾರದ ಮೂಲಕ ಅರುಣ್‌ ಕುಮಾರ್‌ ಲೋಕಸಭಾ ಚುನಾವಣೆಯ ಕಣಕ್ಕಿಳಿಯಬೇಕು ಎಂದು ಸಭೆಯಲ್ಲಿದ್ದ ಕಾರ್ಯಕರ್ತರು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಅರುಣ್‌, ನಿಮ್ಮ ಅಪೇಕ್ಷೆಯಂತೆ ನಡೆದುಕೊಳ್ಳುವೆ ಎಂದು ಘೋಷಿಸಿದರು.

ಯಡಿಯೂರಪ್ಪ ಪಕ್ಷ ತೊರೆಯಲಿಲ್ಲವೇ?

ಯಡಿಯೂರಪ್ಪ, ಹಾಲಾಡಿ ಶ್ರೀನಿವಾಸ ಶೆಟ್ಟಿ ಮೊದಲಾದವರು ಬಿಜೆಪಿ ತೊರೆದು ಚುನಾವಣೆಗೆ ಸ್ಪರ್ಧಿಸಿ ದ್ದರು. ಅವರಿಗೆಲ್ಲ ಮತ್ತೆ ಅವಕಾಶ ಸಿಕ್ಕಿದೆ. ಯಡಿಯೂರಪ್ಪನವರ ಪುತ್ರನಿಗೆ ರಾಜ್ಯಾಧ್ಯಕ್ಷತೆ ಸಿಕ್ಕಿದೆ. ಹಾಗಿರುವಾಗ ಅರುಣ್‌ ಪುತ್ತಿಲ ಮಾತ್ರ ಬರಬಾರದು ಅಂದರೆ ಏನರ್ಥ ಎಂದು ಶ್ರೀ ಕೃಷ್ಣ ಉಪಾಧ್ಯಾಯರು ಪ್ರಶ್ನಿಸಿದರು.

ಪುತ್ತಿಲ ಪರಿವಾರದ ಶಶಾಂಕ್‌ ಕೊಟೇಚಾ, ಪ್ರಸನ್ನ ಮಾರ್ಥ, ಉಮೇಶ್‌ ಕೋಡಿಬೈಲು, ಮನೀಶ್‌ ಕುಲಾಲ್‌, ಮಲ್ಲಿಕಾ ಪ್ರಸಾದ್‌, ಅನಿಲ್‌, ರಾಜೇಶ್‌ ಮೊದಲಾದವರಿದ್ದರು. ರವಿ ಕುಮಾರ್‌ ರೈ ಸ್ವಾಗತಿಸಿದರು. ನವೀನ್‌ ರೈ ಪಂಜಳ ನಿರೂಪಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago