Featured

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ ಬಂಧನ – Vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ ಬಂಧನ –

Vishwanews24

ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಇಂದು ಮಧ್ಯಾಹ್ನ ಖುಷಿಕೇಶ್‌ ಸೋನಾವಣೆ ಮಹತ್ವದ ಸುದ್ದಿಗೋಷ್ಠಿ

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದು, ಗೌಪ್ಯ ಸ್ಥಳದಲ್ಲಿ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಶಿಯಾಬ್, ಬಶೀರ್, ರಿಯಾಝ್ ಎಂದು ಗುರುತಿಸಲಾಗಿದೆ. ಈ ಮೂವರನ್ನು ವಿಶೇಷ ತನಿಖಾ ತಂಡ ಕೇರಳದಲ್ಲಿ ಬಂಧಿಸಿದ್ದು, ಈಗಾಗಲೇ ಸ್ಥಳ ಮಹಜರು ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಈ ಹಿಂದೆ ಒಟ್ಟು 7 ಜನರನ್ನು ಬಂಧಿಸಿದ್ದರು. ಅವರು ಪ್ರವೀಣ್‌ ನೆಟ್ಟಾರು ಚಲನವಲನ, ಕೃತ್ಯಕ್ಕೆ ಬೈಕ್‌ ನೀಡಿದ್ದು ಸೇರಿದಂತೆ ಆರೋಪಿಗಳಿಗೆ ಆಶ್ರಯ ನೀಡಿದ್ದರ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.

ಇದೀಗ ಬಂಧಿತ ಮೂವರು ಕೃತ್ಯದಲ್ಲಿ ನೇರವಾಗಿ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ. ಇವರೂ ಕೂಡಾ ಉಳಿದವರಂತೆ ಸ್ಥಳೀಯರೇ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ. ಸದ್ಯ ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿದ್ದು, ನಿನ್ನೆ ಹಾಸನ, ಚಿಕ್ಕಮಗಳೂರು ಸೇರಿದಂತೆ ಒಟ್ಟು 6 ಜಿಲ್ಲೆಗಳ ಎಸ್ಪಿಗಳ ಸಭೆಯನ್ನು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ನಡೆಸಿದ್ದರು.

ಈ ಬಗ್ಗೆ ಇಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಖುಷಿಕೇಶ್‌ ಸೋನಾವಣೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಜುಲೈ 26 ರಂದು ಪ್ರವೀಣ್ ನೆಟ್ಟಾರುವನ್ನು ಬರ್ಬರವಾಗಿ ಹತ್ಯೆಗೈದು ಆರೋಪಿಗಳು ಪರಾರಿಯಾಗಿದ್ದರು, ಇದೀಗ ಆರೋಪಿಗಳನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ಆರೋಪಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ.

ಕುಂದಾಪುರ: ನಮ್ಮದು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಗಾಂಧೀಜಿಯವರ ಪೀಳಿಗೆ : ವಿನಯ್ ಕುಮಾರ್ ಸೊರಕೆ – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago