Featured

ಪುತ್ತೂರು : ಪ್ರವೀಣ್ ನೆಟ್ಟಾರು ಮನೆಗಾಗಿ ಮೀಸಲಿರಿಸಿದ್ದ ಹಣದಿಂದ ಬಡವರಿಗೆ ಮನೆ ನಿರ್ಮಾಣಕ್ಕೆ ಬಿಲ್ಲವ ಸಮಾಜ ತೀರ್ಮಾನ – Vishwanews24

ಪ್ರವೀಣ್ ನೆಟ್ಟಾರು ಮನೆಗಾಗಿ ಮೀಸಲಿರಿಸಿದ್ದ ಹಣದಿಂದ ಬಡವರಿಗೆ ಮನೆ ನಿರ್ಮಾಣಕ್ಕೆ ಬಿಲ್ಲವ ಸಮಾಜ ತೀರ್ಮಾನ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಕುಟುಂಬದವರಿಗೆ ದಕ್ಷಿಣ ಕನ್ನಡ, ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ರೂ.ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುತ್ತೇವೆ ಎಂದು ಹೇಳಿದ್ದು, ಇದೀಗ ಅವಕಾಶ ಇಲ್ಲದ ನಿಟ್ಟಿನಲ್ಲಿಇದೇ ಹಣದಿಂದ ಪ್ರವೀಣ್‌ ನೆಟ್ಟಾರು ಸ್ಮರಣಾರ್ಥ ದಕ್ಷಿಣ ಕನ್ನಡ, ಉಡುಪಿ ವಿಧಾನಸಭೆ ಕ್ಷೇತ್ರದ 14 ಮಂದಿ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಲ್ಲವ ಸಮಾಜದ ಮುಖಂಡ ಜಯಂತ ನಡುಬೈಲು ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವೀಣ್‌ ನೆಟ್ಟಾರು ಅವರ ಶ್ರದ್ಧಾಂಜಲಿ ಸಭೆಯಲ್ಲಿಅವರ ಕುಟುಂಬದವರಿಗೆ ಮನೆ ನಿರ್ಮಿಸುವ ಭರವಸೆ ನೀಡಲಾಗಿತ್ತು. ಅಲ್ಲದೆ ಮನೆಯ 3ಡಿ ವಿನ್ಯಾಸದ ಜತೆ ಮನೆ ನಿರ್ಮಾಣಕ್ಕೆ ಏಳು ಲಕ್ಷ ರೂ. ಮುಂಗಡ ಹಣವನ್ನು ಪ್ರವೀಣ್‌ ನೆಟ್ಟಾರು ಅವರ ಕುಟುಂಬದವರ ಮೂಲಕ ಗುತ್ತಿಗೆದಾರರಿಗೆ ನೀಡಲಾಗಿತ್ತು.

ಮಂಗಳೂರು : ಕಾಂತಾರ ಸಿನಿಮಾದಲ್ಲಿ ದಲಿತರ ಮತ್ತು ಮಹಿಳೆಯರ ಅವಹೇಳನ.. ಸಿನಿಮಾ ಸ್ಥಗಿತಕ್ಕೆ ಸಮತಾ ಸೈನಿಕ ದಳ ಆಗ್ರಹ – Vishwanews24

ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ಮನೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದರು. ಇದಕ್ಕೆ ಭೂಮಿಪೂಜೆಯೂ ನಡೆದಿದೆ. ಈ ವಿಚಾರ ಸ್ವಾಗತಾರ್ಹವಾಗಿದ್ದು, ಈ ವಿಚಾರವನ್ನು ಸಂಸದರು ಬಿಲ್ಲವ ಮುಖಂಡರ ಜತೆ ಚರ್ಚಿಸಿ ಈ ವಿಚಾರಕ್ಕೆ ಇಳಿಯಬೇಕಿತ್ತು ಎಂಬುದು ಬಿಲ್ಲವ ಮುಖಂಡರಿಂಂದ ಅಭಿಪ್ರಾಯ ವ್ಯಕ್ತವಾಗಿದೆ.

ಈ ಕುರಿತು ನಮ್ಮ ಯಾವುದೇ ವಿರೋಧವಿಲ್ಲ. ಅದಾದ ಬಳಿಕ ಗುತ್ತಿಗೆದಾರರಿಗೆ ನೀಡಿದ ಏಳು ಲಕ್ಷವನ್ನು ನಾವು ಹಿಂಪಡೆದಿದ್ದೇವೆ ಎಂದು ತಿಳಿಸಿದರು.

ಇದೀಗ ನೆಟ್ಟಾರು ಕುಟುಂಬಕ್ಕೆ ಮನೆ ನಿರ್ಮಿಸಲು ಬಳಸುವ 45 ಲಕ್ಷ ರೂ.ನಲ್ಲಿ ತಲಾ ಐದು ಲಕ್ಷ ರೂ. ವೆಚ್ಚದಲ್ಲಿ14 ಮನೆ ನಿರ್ಮಿಸಿ ಕೊಡುವ ಯೋಜನೆಯಿದೆ. ಇದೀಗ ಕ್ಯಾನ್ಸರ್‌ನಿಂದ ಬಳಲುತ್ತಿರುವ ಪುಣಚ ಗ್ರಾಮದ ನಿವಾಸಿ ಚಂದ್ರಾವತಿ ಹಾಗೂ ಬಂಟ್ವಾಳ ಸಜಿಪಮೂಡ ನಿವಾಸಿ ಸುಂದರಿ ಅವ ಕುಟುಂಬಕ್ಕೆ ಮೊದಲ ಹಂತದಲ್ಲಿ ಮನೆ ನಿರ್ಮಾಣವಾಗಲಿದ್ದು, ಕಾಮಗಾರಿಯನ್ನು ಮುಂದಿನ ವಾರದಲ್ಲಿ ಹಮ್ಮಿಕೊಳ್ಳಲಾಗುವುದು.
ಉಳಿದ 12 ಮನೆಗಳನ್ನು ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.

ಬೈಂದೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೆ ಗೋಪಾಲ ಪೂಜಾರಿ ಅರ್ಜಿ‌ ಸಲ್ಲಿಕೆ – Vishwanews24

ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವ ಮುಖಂಡರಾದ ಉಲ್ಲಾಸ್‌ ಕೋಟ್ಯಾನ್‌, ಅವಿನಾಶ್‌ ಸುವರ್ಣ ಮಂಗಳೂರು, ಮೋಹನ್‌ದಾಸ್‌ ಬಂಗೇರ, ಕಿಶನ್‌ ಅಮಿನ್‌ ಉಪಸ್ಥಿತರಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

19 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

19 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

19 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

22 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago