Featured

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‌ಐಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು – ಮಸೂದ್ ಹತ್ಯೆಗೆ ಪ್ರತೀಕಾರ  – Vishwanews24

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‌ಐಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು –

ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ

ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ಸುದ್ದಿಯೊಂದು ಹೊರ ಬಿದ್ದಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು ಈಗಾಗಲೇ ಸುಳ್ಯ ನಿವಾಸಿ ಶಿಹಾಬ್, ಪಾಲ್ತಾಡಿ ಅಂಕತ್ತಡ್ಕದ ರಿಯಾಝ್, ಸುಳ್ಯ ಎಲಿಮಲೆಯ ಬಶೀರ್, ಸವಣೂರಿನ ಝಾಕಿರ್, ಬೆಳ್ಳಾರೆಯ ಶಫೀಕ್, ಪಳ್ಳಮಜಲು ನಿವಾಸಿಗಳಾದ ಸದ್ದಾಂ, ಹ್ಯಾರಿಸ್, ಬೆಳ್ಳಾರೆ ಗೌರಿಹೊಳೆಯ ನೌಫಲ್, ನಾವೂರಿನ ಆಬಿದ್, ಜಟ್ಟಿಪಳ್ಳದ ಕಬೀರ್, ಬೆಳ್ಳಾರೆ ಕುನ್ನಾಗುಡ್ಡೆ ನಿವಾಸಿ ಬೆಳ್ಳಾರೆ ಗ್ರಾ.ಪಂ. ಸದಸ್ಯ ಕೆ.ಮಹಮ್ಮದ್ ಇಕ್ಬಾಲ್, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಕೆ.ಇಸ್ಮಾಯಿಲ್ ಶಾಫಿ ಬೆಳ್ಳಾರೆ ಮತ್ತು ನಾವೂರು ಗಾಂಧಿನಗರ ನಿವಾಸಿ ಇಬ್ರಾಹಿಂ ಶಾ ಎಂಬವರನ್ನು ಬಂಧಿಸಿದ್ದಾರೆ.

ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ, ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ..

ಇನ್ನು ವಿಚಾರಣೆಯಲ್ಲಿ ಮಸೂದ್ ಹತ್ಯೆ ಬಳಿಕ ಅದಕ್ಕೆ ಪ್ರತೀಕಾರವಾಗಿ ಮತ್ತೊಂದು ಕೊಲೆ ನಡೆಸಿ ಸಮಾಜದಲ್ಲಿ ಭಯ ಹುಟ್ಟಿಸುವ ಉದ್ದೇಶವನ್ನು ಪಿಎಫ್‌ಐ ಹೊಂದಿದ್ದು, ಕೆಲವೇ ದಿನಗಳಲ್ಲಿ ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರು ಸಂಚು ರೂಪಿಸಿ ಪ್ರವೀಣ್ ನೆಟ್ಟಾರು ಟಾರ್ಗೆಟ್ ಮಾಡಿದ್ದರು ಎಂಬ ಅಂಶ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಂಧಿತನಾಗಿರುವ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ ಮತ್ತು ಪಿಎಫ್‌ಐ ಮುಖಂಡ ಜಾಬೀರ್ ಅರಿಯಡ್ಕರವರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಸುಳ್ಯ ತಾಲೂಕು ಬೆಳ್ಳಾರೆ ಬೂಡು ನಿವಾಸಿ ಮಹಮ್ಮದ್ ಮುಸ್ತಫಾ, ಮಡಿಕೇರಿ ನಿವಾಸಿ ತುಫೈಲ್ ಎಂ.ಎಚ್., ಸುಳ್ಯ ಕಲ್ಲನೊಟ್ಟು ನಿವಾಸಿ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ಧೀಕ್ ಯಾನೆ ಪೈಂಟರ್ ಸಿದ್ಧೀಕ್ ಪತ್ತೆಗೆ ಲುಕೌಟ್ ನೊಟೀಸ್ ಹೊರಡಿಸಿರುವ ಎನ್‌ಐಎ ಅಧಿಕಾರಿಗಳು ಈ ನಾಲ್ವರ ಪತ್ತೆಗೆ ವಿವಿದೆಡೆ ಬಲೆ ಬೀಸಿದ್ದಾರೆ.

BREAKING NEWS – ಮೂಳೂರು ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ ಡೈವರ್ಶನ್ನಲ್ಲಿ ಭೀಕರ ಅಪಘಾತ : ಬೈಕ್ ಸವಾರ ಗಂಭೀರ – Vishwanews24 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago