Featured

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳು ಶರಣಾಗದಿದ್ದಲ್ಲಿಆಸ್ತಿ ಮುಟ್ಟುಗೋಲು – Vishwanews24

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳು ಶರಣಾಗದಿದ್ದಲ್ಲಿ ಮನೆ ಜಪ್ತಿಯ ಎಚ್ಚರಿಕೆ

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ವಿರುದ್ದ ಇದೀಗ ರಾಷ್ಟ್ರೀಯ ತನಿಖಾದಳ ತನ್ನ ಹೊಸ ಅಸ್ತ್ರ ಪ್ರಯೋಗಿಸಿದ್ದು, ಆರೋಪಿಗಳು ಎರಡು ದಿನದಲ್ಲಿ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮುಂದಾಗಿದ್ದಾರೆ.

ಇಂದು ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂನ್ 30ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಗಳನ್ನು ಮುಟ್ಟುಗೋಲು ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.ಎನ್‌ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯದ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡಲಾಗುವುದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆಯೂ ಬೆಳ್ಳಾರೆಯಲ್ಲಿ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಘೋಷಿಸಿ ಆರೋಪಿ ಮುಸ್ತಫ ಎಂಬಾತನ ಮನೆಗೂ ಆದೇಶ ಪ್ರತಿ ಅಂಟಿಸಲಾಗಿದೆ.

ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. NIA ನ್ಯಾಯಾಲಯದ ಅಧಿಕಾರಿಗಳು ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಹಾಗೂ ಮುಸ್ತಾಫ್ ನಿವಾಸಕ್ಕೆ ಈ ಕುರಿತಾದ ಭಿತ್ತಿಪತ್ರಗಳನ್ನುಅಂಟಿಸಿದ್ದು ಆರೋಪಿಗಳಿಗೆ ಶರಣಾಗಲು ಇನ್ನೆರೆಡೇ ದಿನ ಕಾಲಾವಕಾಶ ನೀಡಿರುವುದಾಗಿ ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago