ಇಂದು ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂನ್ 30ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಗಳನ್ನು ಮುಟ್ಟುಗೋಲು ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.ಎನ್ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯದ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡಲಾಗುವುದು ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆಯೂ ಬೆಳ್ಳಾರೆಯಲ್ಲಿ ಧ್ವನಿವರ್ಧಕದ ಮೂಲಕ ಎನ್ಐಎ ನ್ಯಾಯಾಲಯದ ಆದೇಶವನ್ನು ಘೋಷಿಸಿ ಆರೋಪಿ ಮುಸ್ತಫ ಎಂಬಾತನ ಮನೆಗೂ ಆದೇಶ ಪ್ರತಿ ಅಂಟಿಸಲಾಗಿದೆ.
ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. NIA ನ್ಯಾಯಾಲಯದ ಅಧಿಕಾರಿಗಳು ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಹಾಗೂ ಮುಸ್ತಾಫ್ ನಿವಾಸಕ್ಕೆ ಈ ಕುರಿತಾದ ಭಿತ್ತಿಪತ್ರಗಳನ್ನುಅಂಟಿಸಿದ್ದು ಆರೋಪಿಗಳಿಗೆ ಶರಣಾಗಲು ಇನ್ನೆರೆಡೇ ದಿನ ಕಾಲಾವಕಾಶ ನೀಡಿರುವುದಾಗಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…