ಪುತ್ತೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿರುವ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ ಅವರು ಪ್ರವೀಣ್ ಕುಟುಂಬಕ್ಕೆ 11 ಲಕ್ಷ ರೂ. ನೆರವು ನೀಡಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ ಮಾಹಿತಿಯನ್ನು ಇತ್ತೀಚೆಗಷ್ಟೇ ಅವರು ಟ್ವೀಟರ್ನಲ್ಲಿ ಕೇಳಿದ್ದರು. ಆ ಬಳಿಕ 11 ಲಕ್ಷ ರೂ.ಗಳನ್ನು ಪ್ರವೀಣ್ ಪತ್ನಿ ನೂತನಾ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದಾಗಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮನೀಶ್ ಮುಂದ್ರಾ ಅವರು ಅಂಖೋನ್ ದೇಖಿ, ಮಸಾನ್, ಕದ್ವಿ ಹವಾ ಸೇರಿದಂತೆ ವಿವಿಧ ಬಾಲಿವುಡ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. 2017ರಲ್ಲಿ ಅವರ ನಿರ್ಮಾಣದ ಧನಕ್ ಅತ್ಯುತ್ತಮ ಮಕ್ಕಳ ಚಲನಚಿತ್ರ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿತ್ತು. ಅಲ್ಲದೆ, ನ್ಯೂಟನ್ ಚಿತ್ರ ಆಸ್ಕರ್ ಪ್ರಶಸ್ತಿಗೆ ಪ್ರವೇಶ ಪಡೆದಿತ್ತು. ಅಸಹಾಯಕರಿಗೆ ನೆರವಾಗುವ ಕೆಲಸದಲ್ಲಿಯೂ ತೊಡಗಿಸಿಕೊಂಡಿರುವ ಮುಂದ್ರಾ, ಕೊರೊನಾ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಿಗೆ ಪಿಪಿಇ ಕಿಟ್ಗಳನ್ನು ಒದಗಿಸಿಕೊಟ್ಟಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…