ಪುತ್ತೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿರುವ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ ಅವರು ಪ್ರವೀಣ್ ಕುಟುಂಬಕ್ಕೆ 11 ಲಕ್ಷ ರೂ. ನೆರವು ನೀಡಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ ಮಾಹಿತಿಯನ್ನು ಇತ್ತೀಚೆಗಷ್ಟೇ ಅವರು ಟ್ವೀಟರ್ನಲ್ಲಿ ಕೇಳಿದ್ದರು. ಆ ಬಳಿಕ 11 ಲಕ್ಷ ರೂ.ಗಳನ್ನು ಪ್ರವೀಣ್ ಪತ್ನಿ ನೂತನಾ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದಾಗಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಮನೀಶ್ ಮುಂದ್ರಾ ಅವರು ಅಂಖೋನ್ ದೇಖಿ, ಮಸಾನ್, ಕದ್ವಿ ಹವಾ ಸೇರಿದಂತೆ ವಿವಿಧ ಬಾಲಿವುಡ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. 2017ರಲ್ಲಿ ಅವರ ನಿರ್ಮಾಣದ ಧನಕ್ ಅತ್ಯುತ್ತಮ ಮಕ್ಕಳ ಚಲನಚಿತ್ರ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿತ್ತು. ಅಲ್ಲದೆ, ನ್ಯೂಟನ್ ಚಿತ್ರ ಆಸ್ಕರ್ ಪ್ರಶಸ್ತಿಗೆ ಪ್ರವೇಶ ಪಡೆದಿತ್ತು. ಅಸಹಾಯಕರಿಗೆ ನೆರವಾಗುವ ಕೆಲಸದಲ್ಲಿಯೂ ತೊಡಗಿಸಿಕೊಂಡಿರುವ ಮುಂದ್ರಾ, ಕೊರೊನಾ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಿಗೆ ಪಿಪಿಇ ಕಿಟ್ಗಳನ್ನು ಒದಗಿಸಿಕೊಟ್ಟಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…