Featured

ಪುತ್ತೂರು : ಪ್ರೀತಿಯ ನಾಟಕವಾಡಿ ಯುವತಿಯರಿಗೆ ಲೈಂಗಿಕ ಕಿರುಕುಳ – ಆರೋಪಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು – Vishwanews24

ಪುತ್ತೂರು : ಪ್ರೀತಿಯ ನಾಟಕವಾಡಿ ಯುವತಿಯರಿಗೆ ಲೈಂಗಿಕ ಕಿರುಕುಳ – ಆರೋಪಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ..

ಪುತ್ತೂರು: ಪ್ರೀತಿಯ ನಾಟಕವಾಡಿ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಪುತ್ತೂರಿನ ನಿತೇಶ್ ರೈ ಎಂಬಾತನ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ದೂರು ದಾಖಲಾಗಿದೆ.

ನಿತೇಶ್ ಕೆಲಸದ ಸಂದರ್ಭಗಳಲ್ಲಿ ಹಲವು ಊರುಗಳಿಗೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಅಲ್ಲಿನ ಹೆಣ್ಣು ಮಕ್ಕಳ ನಂಬರ್ ಪಡೆದುಕೊಂಡು ಅವರೊಂದಿಗೆ ಸಲುಗೆ ಬೆಳೆಸಿಕೊಂಡು ಬಳಿಕ ಪ್ರೀತಿಸುತ್ತೇನೆ ಎಂದು ನಾಟಕವಾಡಿ ಅವರನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಸಿಕ್ಕಸಿಕ್ಕಲ್ಲಿ ಅಮಾಯಕ ಹೆಣ್ಣು ಮಕ್ಕಳ ನಂಬರ್ ಪಡೆದುಕೊಂಡು ಅವರನ್ನ ತನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ಈತನ ವಿರುದ್ದ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ನಿತೇಶ್ ಅಪ್ರಾಪ್ತ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡು, ಆಕೆಯ ಬಳಿ ಪ್ರೀತಿಸುತ್ತಿದ್ದೇನೆ ಎಂದು ನಾಟಕವಾಡಿ ಲೈಂಗಿಕ ದೌರ್ಜನ್ಯ ಎಸಗಿ, ನಂತರ ನಿರಂತರವಾಗಿ ಅಕೆಯ ಫೋಟೋಗಳನ್ನು ಸೆರೆಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ. ಅಲ್ಲದೆ ಈತನ ಸ್ನೇಹಿತರಿಗೂ ಆಕೆಯ ನಂಬರ್ ನೀಡಿ ಲೈಂಗಿಕವಾಗಿ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದ. ಇದನ್ನು ತಿಳಿದ ಹುಡುಗಿಯ ಪೋಷಕರು ಹಾಗೂ ಸ್ಥಳೀಯರು ಸೇರಿ ಈತನನ್ನ ಹೆಡೆಮುರಿಕಟ್ಟಿ ಧರ್ಮದೇಟು ನೀಡಿದ್ದರು.

ಇದೀಗ ನಿತೇಶ್ ರೈ ವಿರುದ್ಧ ಸಂಪ್ಯ ಠಾಣೆಯಲ್ಲಿ ಇಬ್ಬರು ಯುವತಿಯರು ದೂರನ್ನು ನೀಡಿದ್ದು, ಫೋಕ್ಸೋ, ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಸದ್ಯ ಈತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago