Featured

ಪುತ್ತೂರು : ಪ್ರೀತಿಯ ನಾಟಕವಾಡಿ ಯುವತಿಯರಿಗೆ ಲೈಂಗಿಕ ಕಿರುಕುಳ – ಆರೋಪಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು – Vishwanews24

ಪುತ್ತೂರು : ಪ್ರೀತಿಯ ನಾಟಕವಾಡಿ ಯುವತಿಯರಿಗೆ ಲೈಂಗಿಕ ಕಿರುಕುಳ – ಆರೋಪಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ..

ಪುತ್ತೂರು: ಪ್ರೀತಿಯ ನಾಟಕವಾಡಿ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಪುತ್ತೂರಿನ ನಿತೇಶ್ ರೈ ಎಂಬಾತನ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿ ದೂರು ದಾಖಲಾಗಿದೆ.

ನಿತೇಶ್ ಕೆಲಸದ ಸಂದರ್ಭಗಳಲ್ಲಿ ಹಲವು ಊರುಗಳಿಗೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಅಲ್ಲಿನ ಹೆಣ್ಣು ಮಕ್ಕಳ ನಂಬರ್ ಪಡೆದುಕೊಂಡು ಅವರೊಂದಿಗೆ ಸಲುಗೆ ಬೆಳೆಸಿಕೊಂಡು ಬಳಿಕ ಪ್ರೀತಿಸುತ್ತೇನೆ ಎಂದು ನಾಟಕವಾಡಿ ಅವರನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಸಿಕ್ಕಸಿಕ್ಕಲ್ಲಿ ಅಮಾಯಕ ಹೆಣ್ಣು ಮಕ್ಕಳ ನಂಬರ್ ಪಡೆದುಕೊಂಡು ಅವರನ್ನ ತನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ಈತನ ವಿರುದ್ದ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.

ನಿತೇಶ್ ಅಪ್ರಾಪ್ತ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡು, ಆಕೆಯ ಬಳಿ ಪ್ರೀತಿಸುತ್ತಿದ್ದೇನೆ ಎಂದು ನಾಟಕವಾಡಿ ಲೈಂಗಿಕ ದೌರ್ಜನ್ಯ ಎಸಗಿ, ನಂತರ ನಿರಂತರವಾಗಿ ಅಕೆಯ ಫೋಟೋಗಳನ್ನು ಸೆರೆಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ. ಅಲ್ಲದೆ ಈತನ ಸ್ನೇಹಿತರಿಗೂ ಆಕೆಯ ನಂಬರ್ ನೀಡಿ ಲೈಂಗಿಕವಾಗಿ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದ. ಇದನ್ನು ತಿಳಿದ ಹುಡುಗಿಯ ಪೋಷಕರು ಹಾಗೂ ಸ್ಥಳೀಯರು ಸೇರಿ ಈತನನ್ನ ಹೆಡೆಮುರಿಕಟ್ಟಿ ಧರ್ಮದೇಟು ನೀಡಿದ್ದರು.

ಇದೀಗ ನಿತೇಶ್ ರೈ ವಿರುದ್ಧ ಸಂಪ್ಯ ಠಾಣೆಯಲ್ಲಿ ಇಬ್ಬರು ಯುವತಿಯರು ದೂರನ್ನು ನೀಡಿದ್ದು, ಫೋಕ್ಸೋ, ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಸದ್ಯ ಈತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago