Featured

ಪುತ್ತೂರು: ಬಸ್‌ನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ; ಸುಳ್ಯದ ಅರೇಬಿಕ್ ಶಾಲಾ ಶಿಕ್ಷಕನ ಬಂಧನ -Vishwanews24

ಪುತ್ತೂರು: ಬಸ್‌ನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ; ಸುಳ್ಯದ ಅರೇಬಿಕ್ ಶಾಲಾ ಶಿಕ್ಷಕನ ಬಂಧನ -Vishwanews24

ಪುತ್ತೂರು : ಬಸ್ಸಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಯೋರ್ವಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸುಳ್ಯದ ಅರೇಬಿಕ್ ಶಾಲೆಯ ಶಿಕ್ಷಕ ಮೊಹಮ್ಮದ್ ಸೈಫುಲ್ಲಾ (32) ಅವರನ್ನು ಫೆಬ್ರವರಿ 23 ಮಂಗಳವಾರ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

 

ಧರ್ಮಸ್ಥಳದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಚಿಕ್ಕಮಗಳೂರು ಮೂಲದವನಾಗಿದ್ದಾನೆ. ಬಸ್‌ನಲ್ಲಿ ಪ್ರಯಾಣಿಸುವಾಗ ಆತ ಆಗಾಗ್ಗೆ ವಿದ್ಯಾರ್ಥಿಯನ್ನು ಮುಟ್ಟಿ ಕಿರುಕುಳ ನೀಡುತ್ತಿದ್ದನೆಂದು ಹೇಳಲಾಗಿದೆ. ಈ ವಿದ್ಯಾರ್ಥಿನಿಯು ಆತನ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿ ಬಸ್‌ನಲ್ಲಿನ ಕಂಡಕ್ಟರ್‌ಗೆ ದೂರು ನೀಡಿದ್ದಾಳೆ.

ಉಡುಪಿ : ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ಎತ್ತಿದ ಕೈ : ಬಿಜೆಪಿ -Vishwanews24

ಚಾಲಕ ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆ ಎದುರು ಬಸ್ ನಿಲ್ಲಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲು ಸಹಾಯ ಮಾಡಿದ್ದು ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಇದೇ ರೀತಿಯ ಘಟನೆ ಸೋಮವಾರ ರಾತ್ರಿ ನಡೆದಿತ್ತು. ಯುವತಿಯೊಬ್ಬಳು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ರಫೀಕ್ ಎಂಬ ಪ್ರಯಾಣಿಕ ತನ್ನ ಮೇಲೆ ಕಿರುಕುಳ ನೀಡಿದ್ದಾನೆ ಎಂದು ಯುವತಿಯು ಆರೋಪಿಸಿದ್ದಳು. ಉಪ್ಪಿನಂಗಡಿ ಬಸ್‌ ನಿಲ್ದಾಣದಲ್ಲಿ ಯುವತಿಯ ಸಂಬಂಧಿಯೊಬ್ಬರು ರಫೀಕ್ ಅವರನ್ನು ಪ್ರಶ್ನಿಸಿದ್ದರು. ಈ ವೇಳೆ ಆರೋಪಿಯ ಬೆಂಬಲಕ್ಕೆ ಬಂದ ತಂಡವೊಂದು ವಿದ್ಯಾರ್ಥಿನಿಯ ಸಂಬಂಧಿಯ ಮೇಲೆ ಹಲ್ಲೆ ನಡೆಸಿತ್ತು.

ಉಡುಪಿ : ಆಯುಷ್ಮಾನ್ ಕಾರ್ಡ್ ಗೊಂದಲ ಪರಿಹರಿಸಿ: ದಿನಕರ ಬಾಬು -Vishwanews24

ಮಾಹಿತಿ ಪಡೆದ ಉಪ್ಪಿನಂಗಡಿ ಪೊಲೀಸರು, ಕೂಡಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

9 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago