Featured

ಪುತ್ತೂರು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ನಾರಾಯಣ ರೈ ಬಂಧಿಸದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ – Vishwanews24

ಪುತ್ತೂರು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ನಾರಾಯಣ ರೈ ಬಂಧಿಸದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ – Vishwanews24

ಪುತ್ತೂರು: ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮತ್ತು ವೈದ್ಯಾಧಿಕಾರಿಗಳು ನೈಜತೆಯನ್ನು ಮರೆಮಾಚಿದ್ದು, ಪ್ರಕರಣದ ನೈಜ ಆರೋಪಿಯನ್ನು ಈತನಕ ಬಂಧಿಸಿಲ್ಲ. ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮೊಗೇರ ಸಂಘದ ರಾಜ್ಯಾಧ್ಯಕ್ಷ ವಿಶ್ವನಾಥ ಅವರು ಎಚ್ಚರಿಸಿದ್ದಾರೆ.

ಅವರು ಗುರುವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಕರಣಕ್ಕೆ ಸಂಬಂಧಿಸಿ ಈತನಕ ಯಾವುದೇ ಸ್ಪಂಧನೆ ದೊರಕಿಲ್ಲ. ಇಲ್ಲಿನ ಶಾಸಕರು, ಮಹಿಳಾ ಕಲ್ಯಾಣ ಇಲಾಖೆಗಳು, ಸ್ಥಳೀಯ ಪಂಚಾಯತ್‍ಗಳು ಕೂಡಾ ಈ ಬಗ್ಗೆ ಯಾವುದೇ ಪರಿಶೀಲನೆ ನಡೆಸಿಲ್ಲ. ಅಲ್ಲದೆ ಬಿಜೆಪಿ, ಕಾಂಗ್ರೆಸ್ ಯಾವ ಪಕ್ಷಗಳು ಮಾತನಾಡುತ್ತಿಲ್ಲ. ಪ್ರಕರಣದ ಆರೋಪಿಯಾಗಿರುವ ನಾರಾಯಣ ರೈ ಎಂಬಾತ ಆರೆಸೆಸ್ಸ್ ಹಾಗೂ ಬಿಜೆಪಿ ಮುಖಂಡರಾಗಿರುವ ಕಾರಣ ಪ್ರಕರಣವನ್ನು ತಿರುಚಿ ಸಂತ್ರಸ್ತ ಬಾಲಕಿಯ ಸಹೋದರನನ್ನೇ ಆರೋಪಿ ಎಂದು ಬಿಂಬಿಸಿ ಬಂಧಿಸಲಾಗಿದೆ.

ಆರೆಸೆಸ್ಸ್ ಮತ್ತು ಬಿಜೆಪಿಗೆ ನೈಜ ಜನಪರವಾದ ಕಾಳಜಿಯಿದ್ದಲ್ಲಿ ತಕ್ಷಣವೇ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಸಂತ್ರಸ್ತೆಯ ಜಾತಿಯನ್ನು ನೋಡದೆ ಆಕೆಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ದಲಿತ ಸಂಘಟನೆಗಳ ಸಮನ್ವಯ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಮಿತ್ತಬೈಲು ಮಾತನಾಡಿ ಈ ಪ್ರಕರಣವು ಅತ್ಯಂತ ನಾಚಿಗೆಗೇಡಿನ ವಿಚಾರವಾಗಿದ್ದು, ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ದಲಿತರ ಮೇಲೆ ನಿರಂತರ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ. ಕೋಮು ವಿಚಾರಗಳಲ್ಲಿ ಪ್ರತಿಭಟನೆ, ಹೋರಾಟ ನಡೆಸುತ್ತಿರುವ ಪರಿವಾರ ಸಂಘಟನೆಗಳು ಈ ವಿಚಾರದಲ್ಲಿ ಮಾತ್ರ ಚಕಾರವೆತ್ತಿಲ್ಲ. ದಲಿತರನ್ನು ಓಟು ಬ್ಯಾಂಕ್‍ಗಳಾಗಿ ಕಾಣುತ್ತಿರುವವರು ಅವರ ನೋವಿಗೆ ಸ್ಪಂಧನೆ ನೀಡುತ್ತಿಲ್ಲ. ಈ ಪ್ರಕರಣದಲ್ಲಿ ನೈಜ ಆರೋಪಿಯನ್ನು ತಕ್ಷಣವೇ ಬಂಧಿಸಬೇಕು. ವಾರದ ಒಳಗಾಗಿ ಆರೋಪಿಯ ಬಂಧನವಾಗದಿ ದ್ದಲ್ಲಿ ಡಿವೈಎಸ್‍ಪಿ ಕಚೇರಿ ಮುಂಭಾಗದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಮೇಶ್ ಕೋಟ್ಯಾನ್, ಜಯಪ್ರಕಾಶ್ ಕನ್ಯಾಡಿ, ಅಶೋಕ್ ಕೊಂಚಾಡಿ, ಸೀತಾರಾಮ ಕೊಂಚಾಡಿ ಉಪಸ್ಥಿತರಿದ್ದರು.

 

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

15 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

15 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

15 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

17 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

17 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

18 hours ago