Featured

ಪುತ್ತೂರು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ನಾರಾಯಣ ರೈ ಬಂಧಿಸದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ – Vishwanews24

ಪುತ್ತೂರು: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ನಾರಾಯಣ ರೈ ಬಂಧಿಸದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ – Vishwanews24

ಪುತ್ತೂರು: ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಮತ್ತು ವೈದ್ಯಾಧಿಕಾರಿಗಳು ನೈಜತೆಯನ್ನು ಮರೆಮಾಚಿದ್ದು, ಪ್ರಕರಣದ ನೈಜ ಆರೋಪಿಯನ್ನು ಈತನಕ ಬಂಧಿಸಿಲ್ಲ. ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮೊಗೇರ ಸಂಘದ ರಾಜ್ಯಾಧ್ಯಕ್ಷ ವಿಶ್ವನಾಥ ಅವರು ಎಚ್ಚರಿಸಿದ್ದಾರೆ.

ಅವರು ಗುರುವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಕರಣಕ್ಕೆ ಸಂಬಂಧಿಸಿ ಈತನಕ ಯಾವುದೇ ಸ್ಪಂಧನೆ ದೊರಕಿಲ್ಲ. ಇಲ್ಲಿನ ಶಾಸಕರು, ಮಹಿಳಾ ಕಲ್ಯಾಣ ಇಲಾಖೆಗಳು, ಸ್ಥಳೀಯ ಪಂಚಾಯತ್‍ಗಳು ಕೂಡಾ ಈ ಬಗ್ಗೆ ಯಾವುದೇ ಪರಿಶೀಲನೆ ನಡೆಸಿಲ್ಲ. ಅಲ್ಲದೆ ಬಿಜೆಪಿ, ಕಾಂಗ್ರೆಸ್ ಯಾವ ಪಕ್ಷಗಳು ಮಾತನಾಡುತ್ತಿಲ್ಲ. ಪ್ರಕರಣದ ಆರೋಪಿಯಾಗಿರುವ ನಾರಾಯಣ ರೈ ಎಂಬಾತ ಆರೆಸೆಸ್ಸ್ ಹಾಗೂ ಬಿಜೆಪಿ ಮುಖಂಡರಾಗಿರುವ ಕಾರಣ ಪ್ರಕರಣವನ್ನು ತಿರುಚಿ ಸಂತ್ರಸ್ತ ಬಾಲಕಿಯ ಸಹೋದರನನ್ನೇ ಆರೋಪಿ ಎಂದು ಬಿಂಬಿಸಿ ಬಂಧಿಸಲಾಗಿದೆ.

ಆರೆಸೆಸ್ಸ್ ಮತ್ತು ಬಿಜೆಪಿಗೆ ನೈಜ ಜನಪರವಾದ ಕಾಳಜಿಯಿದ್ದಲ್ಲಿ ತಕ್ಷಣವೇ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಸಂತ್ರಸ್ತೆಯ ಜಾತಿಯನ್ನು ನೋಡದೆ ಆಕೆಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ದಲಿತ ಸಂಘಟನೆಗಳ ಸಮನ್ವಯ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಮಿತ್ತಬೈಲು ಮಾತನಾಡಿ ಈ ಪ್ರಕರಣವು ಅತ್ಯಂತ ನಾಚಿಗೆಗೇಡಿನ ವಿಚಾರವಾಗಿದ್ದು, ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ದಲಿತರ ಮೇಲೆ ನಿರಂತರ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ. ಕೋಮು ವಿಚಾರಗಳಲ್ಲಿ ಪ್ರತಿಭಟನೆ, ಹೋರಾಟ ನಡೆಸುತ್ತಿರುವ ಪರಿವಾರ ಸಂಘಟನೆಗಳು ಈ ವಿಚಾರದಲ್ಲಿ ಮಾತ್ರ ಚಕಾರವೆತ್ತಿಲ್ಲ. ದಲಿತರನ್ನು ಓಟು ಬ್ಯಾಂಕ್‍ಗಳಾಗಿ ಕಾಣುತ್ತಿರುವವರು ಅವರ ನೋವಿಗೆ ಸ್ಪಂಧನೆ ನೀಡುತ್ತಿಲ್ಲ. ಈ ಪ್ರಕರಣದಲ್ಲಿ ನೈಜ ಆರೋಪಿಯನ್ನು ತಕ್ಷಣವೇ ಬಂಧಿಸಬೇಕು. ವಾರದ ಒಳಗಾಗಿ ಆರೋಪಿಯ ಬಂಧನವಾಗದಿ ದ್ದಲ್ಲಿ ಡಿವೈಎಸ್‍ಪಿ ಕಚೇರಿ ಮುಂಭಾಗದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಮೇಶ್ ಕೋಟ್ಯಾನ್, ಜಯಪ್ರಕಾಶ್ ಕನ್ಯಾಡಿ, ಅಶೋಕ್ ಕೊಂಚಾಡಿ, ಸೀತಾರಾಮ ಕೊಂಚಾಡಿ ಉಪಸ್ಥಿತರಿದ್ದರು.

 

Vishwa News 24

Recent Posts

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

8 minutes ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

18 minutes ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

22 minutes ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

39 minutes ago

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ – vishwanews24

ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…

53 minutes ago

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

21 hours ago