ಪುತ್ತೂರು: ”ಕಾಂಗ್ರೆಸ್ ಆಳ್ವಿಕೆಯಡಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಸಾಕ್ಷರರ, ಬುದ್ಧಿವಂತರ, ಅಭಿವೃದ್ಧಿಶೀಲರ ಪ್ರದೇಶವಾಗಿ ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿತ್ತು. ಇಂಥ ಸಂಪದ್ಭರಿತ ಜಿಲ್ಲೆಯನ್ನು ಕೊಲೆಗಡುಕರ ಜಿಲ್ಲೆಯಾಗಿ ಪರಿವರ್ತಿಸುವ ಮೂಲಕ ಬಿಜೆಪಿ ಕರಾವಳಿಯ ಅಭಿವೃದ್ಧಿಯ ರಥವನ್ನು ಶತಮಾನದಷ್ಟು ಹಿಂದಕ್ಕೆ ಕೊಡೊಯ್ದಿದೆ” ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬುಧವಾರ ನಡದ ಕರಾವಳಿ ಪ್ರಜಾಧ್ವನಿ ಯಾತ್ರೆಯಲ್ಲಿ ಅವರು ಕಾರ್ಯರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
”ಕರಾವಳಿಯು ಶಿಕ್ಷಣ, ಹೊಟೇಲ್ ಉದ್ಯಮ, ಕೈಗಾರಿಕೆ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದ ಪ್ರದೇಶ. ಕಾಂಗ್ರೆಸ್ ಸರಕಾರಗಳ ಅವಧಿಯಲ್ಲಿ ಇಲ್ಲಿನ ವಿದ್ಯಾರ್ಥಿಗಳು ಇಡೀ ರಾಜ್ಯದಲ್ಲೇ ಪ್ರತೀ ವರ್ಷ ಪ್ರಥಮ ಸ್ಥಾನ ಪಡೆಯುತ್ತಿದ್ದರು. ಯಾವಾಗ ಬಿಜೆಪಿ ಇಲ್ಲಿ ಪ್ರವರ್ಧಮಾನಕ್ಕೆ ಬರಲಾರಂಭಿಸಿತೋ ಅಂದಿನಿಂದ ಇಲ್ಲಿನ ಫಲಿತಾಂಶ ಕುಸಿಯುತ್ತಾ ಬಂದು, 18ನೇ ಸ್ಥಾನಕ್ಕೆ ಬರುವಂತಾಯಿತು.
ವಿದ್ಯೆ ಕಲಿಯಬೇಕಾದ ವಿದ್ಯಾರ್ಥಿಗಳ ಮನಸ್ಸಲ್ಲಿ ಕೋಮುದ್ವೇಷ, ಹಿಂಸಾ ಭಾವನೆ, ಮತೀಯವಾದ, ಪ್ರತಿಭಟನೆ ಇತ್ಯಾದಿಗಳನ್ನು ತುಂಬಿಸಿದ ಬಿಜೆಪಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಡಿಮೆಯಾಗಲು ಕಾರಣವಾಯಿತು. ಇದಲ್ಲದೆ ಬಿಜೆಪಿಯಿಂದಾಗಿ ಇಲ್ಲಿ ಕೊಲೆ, ಹಿಂಸೆ, ದೊಂಬಿ ಹೆಚ್ಚಳಗೊಂಡು ತರುಣರೇ ನೂರಾರು ಸಂಖ್ಯೆಯಲ್ಲಿ ಜೈಲಿಗೆ ಸೇರುವಂತಾಯಿತು. ಇದು ಕರಾವಳಿಗೆ ಬಿಜೆಪಿಯ ಕೊಡುಗೆ ಎಂದು ಅವರು ಮುರ ಗೌಡ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನುಡಿದರು.
”ಬಿಜೆಪಿಗರು ಜನರ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್ ಜನರಿಗೆ ಬದುಕು ನೀಡುತ್ತದೆ. ಅಭಿವೃದ್ಧಿ ಮುಂದಿಟ್ಟುಕೊಂಡರೆ ಕಾಂಗ್ರೆಸ್ ಸೋಲಿಸಲು ಸಾಧ್ಯವಿಲ್ಲಎಂಬುದು ಬಿಜೆಪಿಗೆ ಗೊತ್ತು. ಅದಕ್ಕಾಗಿ ಅದು ಜನರನ್ನು ಮತೀಯವಾಗಿ ಒಡೆದು ಭಾವನೆಗಳ ಬೀಜ ಬಿತ್ತುವ ಕೆಲಸ ಮಾಡುತ್ತದೆ. ಕಾಂಗ್ರೆಸ್ ನೀಡಲಿರುವ ಗೃಹಲಕ್ಷ್ಮೀ, ಗೃಹಜ್ಯೋತಿ ಮತ್ತು ಅನ್ನಭಾಗ್ಯಕ್ಕೆ ಹಣ ಎಲ್ಲಿಂದ ಹೊಂದಿಸುತ್ತದೆ ಎಂದು ಬಿಜೆಪಿ ಕೇಳುತ್ತಿದೆ. ಬಿಜೆಪಿ ಸರಕಾರ ಮಾಡುತ್ತಿರುವ 40 ಶೇ. ಭ್ರಷ್ಟಾಚಾರವನ್ನು ನಿಯಂತ್ರಿಸಿದರೆ 126 ಲಕ್ಷ ಕೋಟಿ. ರೂ. ಸಿಗಲಿದೆ. ಇದೇ ಹಣದಿಂದ ನಾವು ಜನರಿಗೆ ಉಚಿತಗಳನ್ನು ನೀಡುತ್ತೇವೆ” ಎಂದು ಹರಿಪ್ರಸಾದ್ ಹೇಳಿದರು.
ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿದರು. ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಪಕ್ಷದ ಪ್ರಮುಖರಾದ ದಿವ್ಯಪ್ರಭಾ ಚಿಲ್ತಡ್ಕ, ಅಶೋಕ್ ಕುಮಾರ್ ರೈ, ಕಾವು ಹೇಮನಾಥ ಶೆಟ್ಟಿ, ಕೃಪಾ ಅಮರ ಆಳ್ವಾ, ಸತೀಶ್ ಕುಮಾರ್ ಕೆಡೆಂಜಿ, ಎಂ.ಎಸ್. ಮಹಮ್ಮದ್, ಭರತ್ ಮುಂಡೋಡಿ, ಡಾ. ರಾಜಾರಾಂ ಕೆ.ಬಿ., ಧನಂಜಯ ಅಡ್ಪಂಗಾಯ, ಪ್ರಸಾದ್ ಕೌಶಲ್ ಶೆಟ್ಟಿ, ಡಾ.ಬೆಳ್ಳಿಪ್ಪಾಡಿ ರಘು, ಲುಕ್ಮಾನ್ ಬಂಟ್ವಾಳ್ ಉಪಸ್ಥಿತರಿದ್ದರು.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…