ಪುತ್ತೂರು : ಬಿಜೆಪಿ ಮುಖಂಡರ ಬ್ಯಾನರ್ ಗಳಿಗೆ ಚಪ್ಪಲಿ ಹಾರ ಹಾಕುವ ನೀಚ ಕೃತ್ಯವನ್ನು ಕಾಂಗ್ರೇಸ್ ಕಾರ್ಯಕರ್ತರು ಮಾಡುವುದಿಲ್ಲ, ನಮಗೆ ಯಾರ ಮೇಲೆ ದ್ವೇಷವೂ ಇಲ್ಲ ಎಂದು ನೂತನ ಶಾಸಕ ಅಶೋಕ್ಕುಮಾರ್ ರೈ ಅವರು ತಿಳಿಸಿದ್ದಾರೆ.
ಪುತ್ತೂರಿನ ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ ಭಾವಚಿತ್ರ ಇರುವ ಬ್ಯಾನರ್ ಅಳವಡಿಸಿ, ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಸುತ್ತಲಿನ ಸಿ.ಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆ ಮಾಡಬೇಕು ಎಂದು ಶಾಸಕ ಅಶೋಕ್ಕುಮಾರ್ ರೈ ಕೋಡಿಂಬಾಡಿ ಆಗ್ರಹಿಸಿದ್ದಾರೆ.
ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸರು, ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು ಅದನ್ನು ಖಂಡಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸಿಗೆ ಮತದಾರರು ನೀಡಿರುವ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದ್ದೇ ಸರ್ಕಾರ ಇರುವಾಗಲೂ ಪ್ರತಿಭಟನೆ ಮಾಡಿದ್ದರು. ಈಗಲೂ ಮಾಡುತ್ತಲೇ ಇದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…