ಪುತ್ತೂರು : ಬಿಜೆಪಿ ಮುಖಂಡರ ಬ್ಯಾನರ್ ಗಳಿಗೆ ಚಪ್ಪಲಿ ಹಾರ ಹಾಕುವ ನೀಚ ಕೃತ್ಯವನ್ನು ಕಾಂಗ್ರೇಸ್ ಕಾರ್ಯಕರ್ತರು ಮಾಡುವುದಿಲ್ಲ, ನಮಗೆ ಯಾರ ಮೇಲೆ ದ್ವೇಷವೂ ಇಲ್ಲ ಎಂದು ನೂತನ ಶಾಸಕ ಅಶೋಕ್ಕುಮಾರ್ ರೈ ಅವರು ತಿಳಿಸಿದ್ದಾರೆ.
ಪುತ್ತೂರಿನ ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ ಭಾವಚಿತ್ರ ಇರುವ ಬ್ಯಾನರ್ ಅಳವಡಿಸಿ, ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಸುತ್ತಲಿನ ಸಿ.ಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆ ಮಾಡಬೇಕು ಎಂದು ಶಾಸಕ ಅಶೋಕ್ಕುಮಾರ್ ರೈ ಕೋಡಿಂಬಾಡಿ ಆಗ್ರಹಿಸಿದ್ದಾರೆ.
ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸರು, ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು ಅದನ್ನು ಖಂಡಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸಿಗೆ ಮತದಾರರು ನೀಡಿರುವ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದ್ದೇ ಸರ್ಕಾರ ಇರುವಾಗಲೂ ಪ್ರತಿಭಟನೆ ಮಾಡಿದ್ದರು. ಈಗಲೂ ಮಾಡುತ್ತಲೇ ಇದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …