Featured

ಪುತ್ತೂರು : ಬೀದಿ ನಾಯಿಗಳ ಪಾಲಿನ ಅನ್ನದಾತನಿಗೆ ಆರ್ಥಿಕ ಸಂಕಷ್ಟ  ; ದಾನಿಗಳ ನಿರೀಕ್ಷೆಯಲ್ಲಿ ರಾಜೇಶ್ ಬನ್ನೂರು – Vishwanews24

ಪುತ್ತೂರು : ಬೀದಿ ನಾಯಿಗಳ ಪಾಲಿನ ಅನ್ನದಾತನಿಗೆ ಆರ್ಥಿಕ ಸಂಕಷ್ಟ  ; ದಾನಿಗಳ ನಿರೀಕ್ಷೆಯಲ್ಲಿ ರಾಜೇಶ್ ಬನ್ನೂರು

ಪುತ್ತೂರು: ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿರುವ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ‌ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ.

ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ನಾಯಿಗಳ ಸಂಕಷ್ಟ ತಾಳಲಾರದೆ ಅನ್ನ ನೀಡುವ ಕಾರ್ಯವನ್ನು ಆರಂಭಿಸಿರುವ ರಾಜೇಶ್ ಬನ್ನೂರು ಆಹಾರ ನೀಡುವ ಕೆಲಸವನ್ನು ನಿಲ್ಲಿಸಲು ತೀರ್ಮಾನಿಸಿದ್ದಾರೆ.

ಸಾಕು ಪ್ರಾಣಿಗಳನ್ನು ಸಾಕುವ ಜನರ ನಿರ್ಲಕ್ಷ್ಯದಿಂದಾಗಿ ಬೀದಿಗೆ ಬೀಳುವ ನಾಯಿಗಳನ್ನು ಕಂಡು ಕಾಣದಂತೆಯೇ ಇರುವವರು ಹೆಚ್ಚು. ಆದರೆ ರಕ್ಷಿತ್ ಶೆಟ್ಟಿಯವರ ಚಾರ್ಲಿ 777 ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ ಕಾಳಜಿ ಕೊಂಚ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು. ಆದರೆ ಚಾರ್ಲಿ ಸಿನಿಮಾ ಬರುವ ಮೊದಲೇ ಅಂದರೆ ಸುಮಾರು 15 ವರ್ಷಗಳ ಹಿಂದೆಯೇ ಈ ಬೀದಿ ನಾಯಿಗಳನ್ನು ತಮ್ಮ ಮನೆಯ ಸದಸ್ಯರಂತೆ ಕಾಣುವ ಅಪರೂಪದ ಅನ್ನದಾತ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು.

ಪುತ್ತೂರು ಪುರಸಭೆ ಇರುವ ಸಮಯದಲ್ಲಿ ಹಲವು ಬಾರಿ ಪುರಸಭೆ ಸದಸ್ಯರಾಗಿ ಮತ್ತು ಒಂದು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದದ್ದಾರೆ. ಇವರು ತಿರುಗಾಡಿದ ಕಡೆಗಳಲ್ಲೆಲ್ಲಾ ನಾಯಿಗಳ ದಂಡು ಇವರನ್ನು ಸುತ್ತುವರಿಯುತ್ತೆ. ಈ ರೀತಿಯಾದ ಪರಿಚಯ ನಾಯಿಗಳಿಗೆ ಆಹಾರ, ಆರೈಕೆ ನೀಡುವ ತನಕ ಬೆಳೆದಿದೆ. ಸುಮಾರು 15 ವರ್ಷಗಳಿಂದ ಬೆಳೆದು ಬಂದ ಈ ಸ್ನೇಹಾಚಾರವನ್ನು ಬಿಟ್ಟು ಬರಲಾರದಂತಹ ಸಂಕಷ್ಟದಲ್ಲಿ ರಾಜೇಶ್ ಇದೀಗ ಸಿಲುಕಿದ್ದಾರೆ.

ಪುತ್ತೂರು ಪೇಟೆಯಾದ್ಯಂತ ಸುಮಾರು 200 ಕ್ಕೂ ಮಿಕ್ಕಿದ ನಾಯಿಗಳ ಅನ್ನದಾತರಾಗಿರುವ ರಾಜೇಶ್ ಬನ್ನೂರು ಈ ನಾಯಿಗಳ ಆರೈಕೆ, ಆಹಾರಕ್ಕಾಗಿ ದಿನವೊಂದಕ್ಕೆ 1000 ದಿಂದ 1500 ರೂಪಾಯಿಗಳನ್ನು ವ್ಯಯಿಸುತ್ತಿದ್ದಾರೆ. ಕೆಲವು ಪರಿಚಯಸ್ಥರು ರಾಜೇಶ್ ಬನ್ನೂರರ ಈ ಸೇವೆಗೆ ತಮ್ಮ ಕೈಯಲ್ಲಾದ ಮಟ್ಟಿಗೆ ಸಹಕಾರ, ಸಹಾಯವನ್ನೂ ನೀಡುತ್ತಿದ್ದಾರೆ. ಆದರೆ‌ ಹೆಚ್ಚಿನ ಪಾಲನ್ನು ರಾಜೇಶ್ ಬನ್ನೂರು ಸ್ವತಃ ಹೊತ್ತುಕೊಳ್ಳುವುದರಿಂದ ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ನಾಯಿಗಳಿಗೆ ಅನ್ನ ನೀಡುವುದನ್ನು ನಿಲ್ಲಿಸಬೇಕೆಂದು ಹಲವು ಬಾರಿ ನಿರ್ಧರಿಸಿದ್ದರೂ, ನಿರ್ಧಾರ ಮಾತ್ರ ಮುಂದೂಡಿಕೊಂಡೇ ಹೋಗಿದೆ. ಆದರೆ ಈ ಬಾರಿ ಮಾತ್ರ ನಿರ್ವಹಿಸಲಾರದ ಹಂತಕ್ಕೆ ತಲುಪಿರುವ ಕಾರಣ ಅನಿವಾರ್ಯವಾಗಿ ಸಮಾಜದ ಸಹಾಯಕ್ಕೆ ಕೈಯೊಡ್ಡಿದ್ದಾರೆ. ಅದರಲ್ಲೂ ಸಮಾಜ ಸೇವಾ ಸಂಘಗಳು ಮುಂದೆ ಬಂದಲ್ಲಿ ಬೀದಿ ನಾಯಿಗಳನ್ನು ಯಾವುದೇ ತೊಂದರೆಯಿಲ್ಲದೆ ನೋಡಿಕೊಳ್ಳಬಹುದು ಎನ್ನುವುದು ಬನ್ನೂರರ‌ ಅಭಿಲಾಷೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago