ಪುತ್ತೂರು: ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿರುವ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ.
ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ನಾಯಿಗಳ ಸಂಕಷ್ಟ ತಾಳಲಾರದೆ ಅನ್ನ ನೀಡುವ ಕಾರ್ಯವನ್ನು ಆರಂಭಿಸಿರುವ ರಾಜೇಶ್ ಬನ್ನೂರು ಆಹಾರ ನೀಡುವ ಕೆಲಸವನ್ನು ನಿಲ್ಲಿಸಲು ತೀರ್ಮಾನಿಸಿದ್ದಾರೆ.
ಸಾಕು ಪ್ರಾಣಿಗಳನ್ನು ಸಾಕುವ ಜನರ ನಿರ್ಲಕ್ಷ್ಯದಿಂದಾಗಿ ಬೀದಿಗೆ ಬೀಳುವ ನಾಯಿಗಳನ್ನು ಕಂಡು ಕಾಣದಂತೆಯೇ ಇರುವವರು ಹೆಚ್ಚು. ಆದರೆ ರಕ್ಷಿತ್ ಶೆಟ್ಟಿಯವರ ಚಾರ್ಲಿ 777 ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ ಕಾಳಜಿ ಕೊಂಚ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು. ಆದರೆ ಚಾರ್ಲಿ ಸಿನಿಮಾ ಬರುವ ಮೊದಲೇ ಅಂದರೆ ಸುಮಾರು 15 ವರ್ಷಗಳ ಹಿಂದೆಯೇ ಈ ಬೀದಿ ನಾಯಿಗಳನ್ನು ತಮ್ಮ ಮನೆಯ ಸದಸ್ಯರಂತೆ ಕಾಣುವ ಅಪರೂಪದ ಅನ್ನದಾತ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು.
ಪುತ್ತೂರು ಪುರಸಭೆ ಇರುವ ಸಮಯದಲ್ಲಿ ಹಲವು ಬಾರಿ ಪುರಸಭೆ ಸದಸ್ಯರಾಗಿ ಮತ್ತು ಒಂದು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದದ್ದಾರೆ. ಇವರು ತಿರುಗಾಡಿದ ಕಡೆಗಳಲ್ಲೆಲ್ಲಾ ನಾಯಿಗಳ ದಂಡು ಇವರನ್ನು ಸುತ್ತುವರಿಯುತ್ತೆ. ಈ ರೀತಿಯಾದ ಪರಿಚಯ ನಾಯಿಗಳಿಗೆ ಆಹಾರ, ಆರೈಕೆ ನೀಡುವ ತನಕ ಬೆಳೆದಿದೆ. ಸುಮಾರು 15 ವರ್ಷಗಳಿಂದ ಬೆಳೆದು ಬಂದ ಈ ಸ್ನೇಹಾಚಾರವನ್ನು ಬಿಟ್ಟು ಬರಲಾರದಂತಹ ಸಂಕಷ್ಟದಲ್ಲಿ ರಾಜೇಶ್ ಇದೀಗ ಸಿಲುಕಿದ್ದಾರೆ.
ಪುತ್ತೂರು ಪೇಟೆಯಾದ್ಯಂತ ಸುಮಾರು 200 ಕ್ಕೂ ಮಿಕ್ಕಿದ ನಾಯಿಗಳ ಅನ್ನದಾತರಾಗಿರುವ ರಾಜೇಶ್ ಬನ್ನೂರು ಈ ನಾಯಿಗಳ ಆರೈಕೆ, ಆಹಾರಕ್ಕಾಗಿ ದಿನವೊಂದಕ್ಕೆ 1000 ದಿಂದ 1500 ರೂಪಾಯಿಗಳನ್ನು ವ್ಯಯಿಸುತ್ತಿದ್ದಾರೆ. ಕೆಲವು ಪರಿಚಯಸ್ಥರು ರಾಜೇಶ್ ಬನ್ನೂರರ ಈ ಸೇವೆಗೆ ತಮ್ಮ ಕೈಯಲ್ಲಾದ ಮಟ್ಟಿಗೆ ಸಹಕಾರ, ಸಹಾಯವನ್ನೂ ನೀಡುತ್ತಿದ್ದಾರೆ. ಆದರೆ ಹೆಚ್ಚಿನ ಪಾಲನ್ನು ರಾಜೇಶ್ ಬನ್ನೂರು ಸ್ವತಃ ಹೊತ್ತುಕೊಳ್ಳುವುದರಿಂದ ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ನಾಯಿಗಳಿಗೆ ಅನ್ನ ನೀಡುವುದನ್ನು ನಿಲ್ಲಿಸಬೇಕೆಂದು ಹಲವು ಬಾರಿ ನಿರ್ಧರಿಸಿದ್ದರೂ, ನಿರ್ಧಾರ ಮಾತ್ರ ಮುಂದೂಡಿಕೊಂಡೇ ಹೋಗಿದೆ. ಆದರೆ ಈ ಬಾರಿ ಮಾತ್ರ ನಿರ್ವಹಿಸಲಾರದ ಹಂತಕ್ಕೆ ತಲುಪಿರುವ ಕಾರಣ ಅನಿವಾರ್ಯವಾಗಿ ಸಮಾಜದ ಸಹಾಯಕ್ಕೆ ಕೈಯೊಡ್ಡಿದ್ದಾರೆ. ಅದರಲ್ಲೂ ಸಮಾಜ ಸೇವಾ ಸಂಘಗಳು ಮುಂದೆ ಬಂದಲ್ಲಿ ಬೀದಿ ನಾಯಿಗಳನ್ನು ಯಾವುದೇ ತೊಂದರೆಯಿಲ್ಲದೆ ನೋಡಿಕೊಳ್ಳಬಹುದು ಎನ್ನುವುದು ಬನ್ನೂರರ ಅಭಿಲಾಷೆ.
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…
ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ ಅಪಘಾತ - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…