Featured

ಪುತ್ತೂರು : ಬೀದಿ ನಾಯಿಗಳ ಪಾಲಿನ ಅನ್ನದಾತನಿಗೆ ಆರ್ಥಿಕ ಸಂಕಷ್ಟ  ; ದಾನಿಗಳ ನಿರೀಕ್ಷೆಯಲ್ಲಿ ರಾಜೇಶ್ ಬನ್ನೂರು – Vishwanews24

ಪುತ್ತೂರು : ಬೀದಿ ನಾಯಿಗಳ ಪಾಲಿನ ಅನ್ನದಾತನಿಗೆ ಆರ್ಥಿಕ ಸಂಕಷ್ಟ  ; ದಾನಿಗಳ ನಿರೀಕ್ಷೆಯಲ್ಲಿ ರಾಜೇಶ್ ಬನ್ನೂರು

ಪುತ್ತೂರು: ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿರುವ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ‌ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ.

ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ನಾಯಿಗಳ ಸಂಕಷ್ಟ ತಾಳಲಾರದೆ ಅನ್ನ ನೀಡುವ ಕಾರ್ಯವನ್ನು ಆರಂಭಿಸಿರುವ ರಾಜೇಶ್ ಬನ್ನೂರು ಆಹಾರ ನೀಡುವ ಕೆಲಸವನ್ನು ನಿಲ್ಲಿಸಲು ತೀರ್ಮಾನಿಸಿದ್ದಾರೆ.

ಸಾಕು ಪ್ರಾಣಿಗಳನ್ನು ಸಾಕುವ ಜನರ ನಿರ್ಲಕ್ಷ್ಯದಿಂದಾಗಿ ಬೀದಿಗೆ ಬೀಳುವ ನಾಯಿಗಳನ್ನು ಕಂಡು ಕಾಣದಂತೆಯೇ ಇರುವವರು ಹೆಚ್ಚು. ಆದರೆ ರಕ್ಷಿತ್ ಶೆಟ್ಟಿಯವರ ಚಾರ್ಲಿ 777 ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ ಕಾಳಜಿ ಕೊಂಚ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು. ಆದರೆ ಚಾರ್ಲಿ ಸಿನಿಮಾ ಬರುವ ಮೊದಲೇ ಅಂದರೆ ಸುಮಾರು 15 ವರ್ಷಗಳ ಹಿಂದೆಯೇ ಈ ಬೀದಿ ನಾಯಿಗಳನ್ನು ತಮ್ಮ ಮನೆಯ ಸದಸ್ಯರಂತೆ ಕಾಣುವ ಅಪರೂಪದ ಅನ್ನದಾತ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು.

ಪುತ್ತೂರು ಪುರಸಭೆ ಇರುವ ಸಮಯದಲ್ಲಿ ಹಲವು ಬಾರಿ ಪುರಸಭೆ ಸದಸ್ಯರಾಗಿ ಮತ್ತು ಒಂದು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದದ್ದಾರೆ. ಇವರು ತಿರುಗಾಡಿದ ಕಡೆಗಳಲ್ಲೆಲ್ಲಾ ನಾಯಿಗಳ ದಂಡು ಇವರನ್ನು ಸುತ್ತುವರಿಯುತ್ತೆ. ಈ ರೀತಿಯಾದ ಪರಿಚಯ ನಾಯಿಗಳಿಗೆ ಆಹಾರ, ಆರೈಕೆ ನೀಡುವ ತನಕ ಬೆಳೆದಿದೆ. ಸುಮಾರು 15 ವರ್ಷಗಳಿಂದ ಬೆಳೆದು ಬಂದ ಈ ಸ್ನೇಹಾಚಾರವನ್ನು ಬಿಟ್ಟು ಬರಲಾರದಂತಹ ಸಂಕಷ್ಟದಲ್ಲಿ ರಾಜೇಶ್ ಇದೀಗ ಸಿಲುಕಿದ್ದಾರೆ.

ಪುತ್ತೂರು ಪೇಟೆಯಾದ್ಯಂತ ಸುಮಾರು 200 ಕ್ಕೂ ಮಿಕ್ಕಿದ ನಾಯಿಗಳ ಅನ್ನದಾತರಾಗಿರುವ ರಾಜೇಶ್ ಬನ್ನೂರು ಈ ನಾಯಿಗಳ ಆರೈಕೆ, ಆಹಾರಕ್ಕಾಗಿ ದಿನವೊಂದಕ್ಕೆ 1000 ದಿಂದ 1500 ರೂಪಾಯಿಗಳನ್ನು ವ್ಯಯಿಸುತ್ತಿದ್ದಾರೆ. ಕೆಲವು ಪರಿಚಯಸ್ಥರು ರಾಜೇಶ್ ಬನ್ನೂರರ ಈ ಸೇವೆಗೆ ತಮ್ಮ ಕೈಯಲ್ಲಾದ ಮಟ್ಟಿಗೆ ಸಹಕಾರ, ಸಹಾಯವನ್ನೂ ನೀಡುತ್ತಿದ್ದಾರೆ. ಆದರೆ‌ ಹೆಚ್ಚಿನ ಪಾಲನ್ನು ರಾಜೇಶ್ ಬನ್ನೂರು ಸ್ವತಃ ಹೊತ್ತುಕೊಳ್ಳುವುದರಿಂದ ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ನಾಯಿಗಳಿಗೆ ಅನ್ನ ನೀಡುವುದನ್ನು ನಿಲ್ಲಿಸಬೇಕೆಂದು ಹಲವು ಬಾರಿ ನಿರ್ಧರಿಸಿದ್ದರೂ, ನಿರ್ಧಾರ ಮಾತ್ರ ಮುಂದೂಡಿಕೊಂಡೇ ಹೋಗಿದೆ. ಆದರೆ ಈ ಬಾರಿ ಮಾತ್ರ ನಿರ್ವಹಿಸಲಾರದ ಹಂತಕ್ಕೆ ತಲುಪಿರುವ ಕಾರಣ ಅನಿವಾರ್ಯವಾಗಿ ಸಮಾಜದ ಸಹಾಯಕ್ಕೆ ಕೈಯೊಡ್ಡಿದ್ದಾರೆ. ಅದರಲ್ಲೂ ಸಮಾಜ ಸೇವಾ ಸಂಘಗಳು ಮುಂದೆ ಬಂದಲ್ಲಿ ಬೀದಿ ನಾಯಿಗಳನ್ನು ಯಾವುದೇ ತೊಂದರೆಯಿಲ್ಲದೆ ನೋಡಿಕೊಳ್ಳಬಹುದು ಎನ್ನುವುದು ಬನ್ನೂರರ‌ ಅಭಿಲಾಷೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago