ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ.
ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…