Featured

ಪುತ್ತೂರು: ಭಿನ್ನಕೋಮಿನ ಜೋಡಿ ಪತ್ತೆ ಪ್ರಕರಣ , ಆರೋಪಿ ವಿರುದ್ದ ಪೋಕ್ಸೋ ದಾಖಲು -Vishwanews24

ಪುತ್ತೂರು :ಭಿನ್ನಕೋಮಿಗೆ ಸೇರಿದ ಪುತ್ತೂರಿನ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಮುಂಬಾಯಿ ನಿವಾಸಿ ಇಲ್ಲಿನ ಲಾಡ್ಜ್ ಒಂದರಲ್ಲಿ ಭಾನುವಾರ (ಅ .20 ರಂದು ) ಪತ್ತೆಯಾದ ಪ್ರಕರಣ ಮಹತ್ವದ ತಿರುವು ಪಡೆದಿದೆ. ಇದೀಗ ವಿದ್ಯಾರ್ಥಿನಿಯೂ ಯುವಕ ಪುಸಾಲಾಯಿಸಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ ದೂರು ನೀಡಿದ್ದಾಳೆ. ಈ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಆರೋಪಿ ತಯ್ಯಬ್ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತರ ಮಾಹಿತಿಯಂತೆ ಪುತ್ತೂರು ನಗರ ಠಾಣೆ ಪೊಲೀಸರು ದಾಳಿ ಮಾಡಿ ಜೋಡಿಯನ್ನು ವಶಕ್ಕೆ ಪಡೆದಿದ್ದರು. ಈ ಜೋಡಿಯು ಭಿನ್ನ ಕೋಮಿಗೆ ಸೇರಿದವರಾಗಿದ್ದು ಪ್ರಕರಣವೂ ಭಾರೀ ಸಂಚಲನ ಉಂಟು ಮಾಡಿತ್ತು.

ವಿದ್ಯಾರ್ಥಿನಿಯೂ ಪುತ್ತೂರಿನ ಸಾಮೆತಡ್ಕ ನಿವಾಸಿಯಾಗಿದ್ದೂ ಯುವಕ ಮಹಾರಾಷ್ಟ್ರ ಮುಂಬೈ ನಿವಾಸಿಯಾದ ತಯ್ಯಬ್ (19 ವರ್ಷ) . ಇವರಿಬ್ಬರೂ ಪರಸ್ಪರ ಸೋಷಿಯಲ್ ಮೀಡಿಯಾApp ಇನ್ಸ್ಟಾಗ್ರಾಂ ಮೂಲಕ ಪರಿಚಿತರಾಗಿದ್ದರು ಎನ್ನಲಾಗಿದೆ . ಸುಮಾರು ಒಂದೂವರೆ ವರ್ಷಗಳಿಂದ ಅವರಿಬ್ಬರೂ ಸ್ನೇಹಿತರಾಗಿದ್ದು, ಅ 19 ರಂದು ಆರೋಪಿ ಪುತ್ತೂರಿಗೆ ಆಗಮಿಸಿದ್ದಾನೆ . ಅಂದು ಪುತ್ತೂರಿನ ಧರ್ಬೆಯ ಲಾಡ್ಜ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾನೆ .

ಮರುದಿನ ಅಂದರೆ ಅ 20 ರಂದು ಯುವತಿಯನ್ನು ಪುತ್ತೂರಿನ ಸ್ಥಳೀಯ ಲಾಡ್ಜ್ ಗೆ ಈತ ಬರಲು ಹೇಳಿದ್ದಾನೆ. ಇವನ ಕರೆಯ ಮೇರೆಗೆ ಭೇಟಿಯಾಗಲು ಬಂದಿದ ಆಕೆಯನ್ನು ಲಾಡ್ಜ್ ನಲ್ಲಿ ಆಕೆಯ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಪ್ರಕರಣ ದಾಖಲಾಗಿದೆ . ಆದರೇ ಇದ್ದಕ್ಕಿಂತ ನಾಲ್ಕು ತಿಂಗಳ ಮೊದಲು ಅವರಿಬ್ಬರೂ ಇದೇ ಲಾಡ್ಜ್ ನಲ್ಲಿ ಭೇಟಿಯಾಗಿದ್ದರು ಆಗಲೂ ಆರೋಪಿ ಈಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಯುವತಿಯ ಹೆತ್ತವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಅರೋಪಿ ತಯ್ಯದ್ ನಾಲ್ಕು ತಿಂಗಳ ಹಿಂದೆ ಅಂದರೆ ಜೂನ್ ನಲ್ಲಿ ಆಗಮಿಸಿ ಅದೇ ಹೊಟೇಲ್ ನಲ್ಲಿ ತಂಗಿದ್ದ. ಈ ವೇಳೆ ಯುವತಿಯನ್ನು ರೂಂಗೆ ಕರೆಯಿಸಿಕೊಂಡಿದ್ದ ಯುವಕ ಯುವತಿ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಆ ಬಳಿಕ ಎರಡನೇ ಬಾರಿ ಸಂತ್ರಸ್ಥ ಯುವತಿಯನ್ನು ಪುತ್ತೂರಿನ ಸ್ಥಳೀಯ ಲಾಡ್ಜ್ ಗೆ ಬರಹೇಳಿದ್ದು, ಭೇಟಿಯಾಗಲು ತೆರಳಿದ ಆಕೆಗೆ ಲಾಡ್ಜ್ ನಲ್ಲಿ ಇಚ್ಚೆಗೆ ವಿರುದ್ದ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

14 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago