ಪುತ್ತೂರು :ಭಿನ್ನಕೋಮಿಗೆ ಸೇರಿದ ಪುತ್ತೂರಿನ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಮುಂಬಾಯಿ ನಿವಾಸಿ ಇಲ್ಲಿನ ಲಾಡ್ಜ್ ಒಂದರಲ್ಲಿ ಭಾನುವಾರ (ಅ .20 ರಂದು ) ಪತ್ತೆಯಾದ ಪ್ರಕರಣ ಮಹತ್ವದ ತಿರುವು ಪಡೆದಿದೆ. ಇದೀಗ ವಿದ್ಯಾರ್ಥಿನಿಯೂ ಯುವಕ ಪುಸಾಲಾಯಿಸಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ ದೂರು ನೀಡಿದ್ದಾಳೆ. ಈ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಆರೋಪಿ ತಯ್ಯಬ್ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.
ಹಿಂದೂ ಸಂಘಟನೆಯ ಕಾರ್ಯಕರ್ತರ ಮಾಹಿತಿಯಂತೆ ಪುತ್ತೂರು ನಗರ ಠಾಣೆ ಪೊಲೀಸರು ದಾಳಿ ಮಾಡಿ ಜೋಡಿಯನ್ನು ವಶಕ್ಕೆ ಪಡೆದಿದ್ದರು. ಈ ಜೋಡಿಯು ಭಿನ್ನ ಕೋಮಿಗೆ ಸೇರಿದವರಾಗಿದ್ದು ಪ್ರಕರಣವೂ ಭಾರೀ ಸಂಚಲನ ಉಂಟು ಮಾಡಿತ್ತು.
ವಿದ್ಯಾರ್ಥಿನಿಯೂ ಪುತ್ತೂರಿನ ಸಾಮೆತಡ್ಕ ನಿವಾಸಿಯಾಗಿದ್ದೂ ಯುವಕ ಮಹಾರಾಷ್ಟ್ರ ಮುಂಬೈ ನಿವಾಸಿಯಾದ ತಯ್ಯಬ್ (19 ವರ್ಷ) . ಇವರಿಬ್ಬರೂ ಪರಸ್ಪರ ಸೋಷಿಯಲ್ ಮೀಡಿಯಾApp ಇನ್ಸ್ಟಾಗ್ರಾಂ ಮೂಲಕ ಪರಿಚಿತರಾಗಿದ್ದರು ಎನ್ನಲಾಗಿದೆ . ಸುಮಾರು ಒಂದೂವರೆ ವರ್ಷಗಳಿಂದ ಅವರಿಬ್ಬರೂ ಸ್ನೇಹಿತರಾಗಿದ್ದು, ಅ 19 ರಂದು ಆರೋಪಿ ಪುತ್ತೂರಿಗೆ ಆಗಮಿಸಿದ್ದಾನೆ . ಅಂದು ಪುತ್ತೂರಿನ ಧರ್ಬೆಯ ಲಾಡ್ಜ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾನೆ .
ಮರುದಿನ ಅಂದರೆ ಅ 20 ರಂದು ಯುವತಿಯನ್ನು ಪುತ್ತೂರಿನ ಸ್ಥಳೀಯ ಲಾಡ್ಜ್ ಗೆ ಈತ ಬರಲು ಹೇಳಿದ್ದಾನೆ. ಇವನ ಕರೆಯ ಮೇರೆಗೆ ಭೇಟಿಯಾಗಲು ಬಂದಿದ ಆಕೆಯನ್ನು ಲಾಡ್ಜ್ ನಲ್ಲಿ ಆಕೆಯ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಪ್ರಕರಣ ದಾಖಲಾಗಿದೆ . ಆದರೇ ಇದ್ದಕ್ಕಿಂತ ನಾಲ್ಕು ತಿಂಗಳ ಮೊದಲು ಅವರಿಬ್ಬರೂ ಇದೇ ಲಾಡ್ಜ್ ನಲ್ಲಿ ಭೇಟಿಯಾಗಿದ್ದರು ಆಗಲೂ ಆರೋಪಿ ಈಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಯುವತಿಯ ಹೆತ್ತವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಅರೋಪಿ ತಯ್ಯದ್ ನಾಲ್ಕು ತಿಂಗಳ ಹಿಂದೆ ಅಂದರೆ ಜೂನ್ ನಲ್ಲಿ ಆಗಮಿಸಿ ಅದೇ ಹೊಟೇಲ್ ನಲ್ಲಿ ತಂಗಿದ್ದ. ಈ ವೇಳೆ ಯುವತಿಯನ್ನು ರೂಂಗೆ ಕರೆಯಿಸಿಕೊಂಡಿದ್ದ ಯುವಕ ಯುವತಿ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದುಬಂದಿದೆ.
ಆ ಬಳಿಕ ಎರಡನೇ ಬಾರಿ ಸಂತ್ರಸ್ಥ ಯುವತಿಯನ್ನು ಪುತ್ತೂರಿನ ಸ್ಥಳೀಯ ಲಾಡ್ಜ್ ಗೆ ಬರಹೇಳಿದ್ದು, ಭೇಟಿಯಾಗಲು ತೆರಳಿದ ಆಕೆಗೆ ಲಾಡ್ಜ್ ನಲ್ಲಿ ಇಚ್ಚೆಗೆ ವಿರುದ್ದ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…