Featured

ಪುತ್ತೂರು: ಭಿನ್ನಕೋಮಿನ ಜೋಡಿ ಪತ್ತೆ ಪ್ರಕರಣ , ಆರೋಪಿ ವಿರುದ್ದ ಪೋಕ್ಸೋ ದಾಖಲು -Vishwanews24

ಪುತ್ತೂರು :ಭಿನ್ನಕೋಮಿಗೆ ಸೇರಿದ ಪುತ್ತೂರಿನ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಮುಂಬಾಯಿ ನಿವಾಸಿ ಇಲ್ಲಿನ ಲಾಡ್ಜ್ ಒಂದರಲ್ಲಿ ಭಾನುವಾರ (ಅ .20 ರಂದು ) ಪತ್ತೆಯಾದ ಪ್ರಕರಣ ಮಹತ್ವದ ತಿರುವು ಪಡೆದಿದೆ. ಇದೀಗ ವಿದ್ಯಾರ್ಥಿನಿಯೂ ಯುವಕ ಪುಸಾಲಾಯಿಸಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ ದೂರು ನೀಡಿದ್ದಾಳೆ. ಈ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಆರೋಪಿ ತಯ್ಯಬ್ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತರ ಮಾಹಿತಿಯಂತೆ ಪುತ್ತೂರು ನಗರ ಠಾಣೆ ಪೊಲೀಸರು ದಾಳಿ ಮಾಡಿ ಜೋಡಿಯನ್ನು ವಶಕ್ಕೆ ಪಡೆದಿದ್ದರು. ಈ ಜೋಡಿಯು ಭಿನ್ನ ಕೋಮಿಗೆ ಸೇರಿದವರಾಗಿದ್ದು ಪ್ರಕರಣವೂ ಭಾರೀ ಸಂಚಲನ ಉಂಟು ಮಾಡಿತ್ತು.

ವಿದ್ಯಾರ್ಥಿನಿಯೂ ಪುತ್ತೂರಿನ ಸಾಮೆತಡ್ಕ ನಿವಾಸಿಯಾಗಿದ್ದೂ ಯುವಕ ಮಹಾರಾಷ್ಟ್ರ ಮುಂಬೈ ನಿವಾಸಿಯಾದ ತಯ್ಯಬ್ (19 ವರ್ಷ) . ಇವರಿಬ್ಬರೂ ಪರಸ್ಪರ ಸೋಷಿಯಲ್ ಮೀಡಿಯಾApp ಇನ್ಸ್ಟಾಗ್ರಾಂ ಮೂಲಕ ಪರಿಚಿತರಾಗಿದ್ದರು ಎನ್ನಲಾಗಿದೆ . ಸುಮಾರು ಒಂದೂವರೆ ವರ್ಷಗಳಿಂದ ಅವರಿಬ್ಬರೂ ಸ್ನೇಹಿತರಾಗಿದ್ದು, ಅ 19 ರಂದು ಆರೋಪಿ ಪುತ್ತೂರಿಗೆ ಆಗಮಿಸಿದ್ದಾನೆ . ಅಂದು ಪುತ್ತೂರಿನ ಧರ್ಬೆಯ ಲಾಡ್ಜ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾನೆ .

ಮರುದಿನ ಅಂದರೆ ಅ 20 ರಂದು ಯುವತಿಯನ್ನು ಪುತ್ತೂರಿನ ಸ್ಥಳೀಯ ಲಾಡ್ಜ್ ಗೆ ಈತ ಬರಲು ಹೇಳಿದ್ದಾನೆ. ಇವನ ಕರೆಯ ಮೇರೆಗೆ ಭೇಟಿಯಾಗಲು ಬಂದಿದ ಆಕೆಯನ್ನು ಲಾಡ್ಜ್ ನಲ್ಲಿ ಆಕೆಯ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಪ್ರಕರಣ ದಾಖಲಾಗಿದೆ . ಆದರೇ ಇದ್ದಕ್ಕಿಂತ ನಾಲ್ಕು ತಿಂಗಳ ಮೊದಲು ಅವರಿಬ್ಬರೂ ಇದೇ ಲಾಡ್ಜ್ ನಲ್ಲಿ ಭೇಟಿಯಾಗಿದ್ದರು ಆಗಲೂ ಆರೋಪಿ ಈಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಯುವತಿಯ ಹೆತ್ತವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಅರೋಪಿ ತಯ್ಯದ್ ನಾಲ್ಕು ತಿಂಗಳ ಹಿಂದೆ ಅಂದರೆ ಜೂನ್ ನಲ್ಲಿ ಆಗಮಿಸಿ ಅದೇ ಹೊಟೇಲ್ ನಲ್ಲಿ ತಂಗಿದ್ದ. ಈ ವೇಳೆ ಯುವತಿಯನ್ನು ರೂಂಗೆ ಕರೆಯಿಸಿಕೊಂಡಿದ್ದ ಯುವಕ ಯುವತಿ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಆ ಬಳಿಕ ಎರಡನೇ ಬಾರಿ ಸಂತ್ರಸ್ಥ ಯುವತಿಯನ್ನು ಪುತ್ತೂರಿನ ಸ್ಥಳೀಯ ಲಾಡ್ಜ್ ಗೆ ಬರಹೇಳಿದ್ದು, ಭೇಟಿಯಾಗಲು ತೆರಳಿದ ಆಕೆಗೆ ಲಾಡ್ಜ್ ನಲ್ಲಿ ಇಚ್ಚೆಗೆ ವಿರುದ್ದ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ್ದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago