ಪುತ್ತೂರು : ಶಿವಮೊಗ್ಗ ಮೂಲದ 27 ಮಂದಿಯನ್ನು ಮತಾಂತರ ಮಾಡಲು ಕರೆಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ನೆಲ್ಯಾಡಿಯ ಕೋಣಾಲು ಸಮೀಪದ ಆರ್ಲದಲ್ಲಿರುವ ಮೊರಿಯಾ ಧ್ಯಾನ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ.
ಧ್ಯಾನ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿದಾಗ 27 ಮಂದಿ ಪತ್ತೆಯಾಗಿದ್ದು, ಅವರಲ್ಲಿ 18 ಮಹಿಳೆಯರು, ಎಂಟು ಪುರುಷರು ಮತ್ತು ಒಬ್ಬರು ಆರು ವರ್ಷದ ಬಾಲಕ. ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಶಿವಮೊಗ್ಗ ಮೂಲದವರಾಗಿದ್ದು, ಕೆಲವರು ಮದ್ಯ ವ್ಯಸನಿಗಳಾಗಿದ್ದು, ಇನ್ನು ಕೆಲವರು ಮಾನಸಿಕ ಅಸ್ವಸ್ಥರು ಎಂದು ತಿಳಿಸಿದ್ದಾರೆ.
ಇನ್ನು ಪ್ರಾರ್ಥನೆಯಿಂದ ಆರೋಗ್ಯ ಸುಧಾರಿಸುತ್ತದೆ ಎಂದು ಯೂಟ್ಯೂಬ್ನಲ್ಲಿ ನೋಡಿದ ಅವರು ಸ್ವಂತ ಖರ್ಚಿನಲ್ಲಿ ಬಸ್ನಲ್ಲಿ ಪ್ರಾರ್ಥನಾ ಕೇಂದ್ರಕ್ಕೆ ಬಂದಿದ್ದು, ಪ್ರಾರ್ಥನೆಗೆ ಹಾಜರಾಗುವಂತೆ ಯಾರೂ ಒತ್ತಾಯಿಸಿಲ್ಲ, ಧರ್ಮ ಪರಿವರ್ತನೆಗೆ ಬಂದಿಲ್ಲ, ತಮ್ಮ ಅಸ್ವಸ್ಥತೆಯಿಂದ ಗುಣಮುಖರಾಗಲು ಬಂದಿದ್ದೇವೆ ಎಂದು ಸ್ಪಷ್ಟಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…