Featured

ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ಪ್ರಕರಣ ; ಇಬ್ಬರು ಸಹೋದರಿಯರ ಬಂಧನ -Vishwanews24

ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಸಹೋದರಿಯರ ಬಂಧನ -Vishwanews24

ಪುತ್ತೂರು: ದೂರು ಅರ್ಜಿಯೊಂದರ ವಿಚಾರಣೆ ವೇಳೆ ಮಹಿಳೆಯೋರ್ವರು ತನ್ನ ಪತಿಗೆ ಹಲ್ಲೆ ನಡೆಸಲು ಮುಂದಾದಾಗ ತಡೆಯಲು ಹೋದ ಮಹಿಳಾ ಠಾಣೆ ಎಸ್ಸೈ ಅವರಿಗೆ ಮಹಿಳೆಯರಿಬ್ಬರು ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸೋಮವಾರ ನಡೆದ ಬಗ್ಗೆ ವರದಿಯಾಗಿದ್ದು, ಹಲ್ಲೆ ನಡೆಸಿದ ಆರೋಪಿ ಮಹಿಳೆಯರನ್ನು ಬಂಧಿಸಲಾಗಿದೆ.

ಮಂಗಳೂರು :ಐಷಾರಾಮಿ ಕಾರು ಮಾರಾಟ ಪ್ರಕರಣ : ಮತ್ತಿಬ್ಬರು ಪೊಲೀಸರ ಅಮಾನತು -Vishwanews24

ಮಹಿಳಾ ಪೊಲೀಸ್ ಠಾಣೆಯ ಎಸ್ಸೈ ಸೇಸಮ್ಮ ಅವರು ಹಲ್ಲೆಗೊಳಗಾದವರು. ಸಾಲ್ಮರ ಮುದ್ದೋಡಿ ನಿವಾಸಿ ಲಾರೆನ್ಸ್ ಡಿ’ಸೋಜ ಅವರ ಪತ್ನಿ ಬೇಬಿ ಡಿಸೋಜ (34) ಮತ್ತು ಆಕೆಯ ಸಹೋದರಿ ಹಾಸನ ಚೆನ್ನರಾಯಪಟ್ಟಣದ ನುಗ್ಗೆಹಳ್ಳಿ ನೆಟ್ಟಕೆರೆ ಗೋಪಾಲ ಎಂಬವರ ಪತ್ನಿ ಆಶಾ (35) ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ

ಫೆ.28ರಂದು ಸುನಿತಾ ಡಿ ಸೋಜಾ ಎಂಬವರು ಬೇಬಿ ಡಿಸೋಜಾ ವಿರುದ್ಧ ಮತ್ತು ಬೇಬಿ ಡಿಸೋಜಾ, ಸುನಿತಾ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಪ್ರತ್ಯೇಕ ದೂರು ನೀಡಿದ್ದರು. ಈ ದೂರಿನ ವಿಚಾರಣೆಗಾಗಿ ಅವರಿಬ್ಬರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಬೇಬಿ ಡಿಸೋಜಳ ಸಹೋದರಿ ಹಾಸನದಲ್ಲಿರುವ ಆಶಾ ಕೂಡಾ ಜೊತೆಗೆ ಬಂದಿದ್ದರು. ಎಸ್ಸೈ ಸೇಸಮ್ಮ ಅವರು ಕುಟುಂಬ ಸಮಸ್ಯೆಯನ್ನು ವಿಚಾರಿಸುತ್ತಿದ್ದ ವೇಳೆ ಬೇಬಿ ಡಿಸೋಜಾ ತನ್ನ ಪತಿ ಲಾರೆನ್ಸ್ ಡಿಸೋಜಾ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದು, ಇದನ್ನು ಗಮನಿಸಿದ ಎಸ್ಸೈ ಸೇಸಮ್ಮ ಹಲ್ಲೆ ನಡೆಯುವುದನ್ನು ತಪ್ಪಿಸಲು ಮುಂದಾದರು. ಈ ವೇಳೆ ಬೇಬಿ ಡಿಸೋಜ ಮತ್ತು ಆಶಾ ಅವರು ಎಸ್ಸೈ ಸೇಸಮ್ಮ ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ರಾಹುಲ್‌ ಅವರೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿಂದಿರುಗಬೇಕು : ಎಂ.ವೀರಪ್ಪ ಮೊಯ್ಲಿ -Vishwanews24

ಘಟನೆಯ ಬಳಿಕ ಎಸ್ಸೈ ಸೇಸಮ್ಮ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಘಟನೆಯ ಕುರಿತು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಬೇಬಿ ಡಿಸೋಜ ಮತ್ತು ಆಶಾ ಸಹೋದರಿಯರನ್ನು ಪೊಲೀಸರು ಬಂಧಿಸಿದ್ದಾರೆ.

ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ , ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ :ದಿನೇಶ್ ಗುಂಡೂರಾವ್ -Vishwanews24

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago