ಪುತ್ತೂರು : ದೇಶದಲ್ಲಿ ಇಂದು ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ನಡೆಸುತ್ತಾರೆ, ನಾನು ಹಿಂದೂ ಆದರೆ ನನಗೆ ಹಿಂದುತ್ವ ಬೇಕಿಲ್ಲ ಎನ್ನುವ ಕಮಂಗಿಗಳಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲ ಎಂದು ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗ್ಡೆ ಹೇಳಿದರು.
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಮಾಜಿ ಸಿಎಂ ಸಿದ್ಧರಾಮಯ್ಯರ ವಿರುದ್ಧ ಪರೋಕ್ಷ ದಾಳಿ ನಡೆಸಿದ ಅವರು ಹಿಂದುತ್ವದ ಬಗ್ಗೆ ಮಾತನಾಡುವ ಆ ಮನುಷ್ಯನಿಗೆ ಅವನ ರಕ್ತದ ಬಗ್ಗೆಯೇ ಗೊತ್ತಿಲ್ಲ. ಅಂತವ ಹಿಂದುತ್ವವೇ ಬೇಡ ಎನ್ನುವ ಮಾತನಾಡುತ್ತಾನೆ. ನಿನಗೆ ಬೇಕೋ,ಬೇಡವೋ ಎನ್ನುವುದನ್ನು ಯಾರು ಕೇಳಿದ್ದಾರೆ. ನಿನಗೆ ಹಿಂದುತ್ವ ಇಲ್ಲ ಅನ್ನೋದನ್ನ ನಾವೆಲ್ಲಾ ಪರಿಗಣಿಸಿ ಬಿಟ್ಟಾಗಿದೆ. ಅಂಥವರಿಂದ ನಮಗೆ ಹಿಂದುತ್ವದ ಪಾಠ ಬೇಕಾಗಿಲ್ಲ ಎಂದ ಅವರು ಜಾತಿಯ ಗೂಡನ್ನು ಬಿಟ್ಡು ಹೊರಗೆ ಬರದವರು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ, ಸರಿಯಾಗಿ ಎರಡು ಪುಸ್ತಕವಿಟ್ಟರೆ ಅದನ್ನ ಓದುವ ಯೋಗ್ಯತೆ ಇಲ್ಲದವರು ಹಿಂದುತ್ವದ ಮಾತನಾಡುತ್ತಾರೆ.
ದೇವಸ್ಥಾನಕ್ಕೆ ಹೇಗೆ ಹೋಗಬೇಕು ಎನ್ನುವ ಪರಿಜ್ಞಾನವಿಲ್ಲದವರು ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.ಯಾರಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲವೋ ಅಂತವರು ಹಿಂದೂ ಆಗಿರಲು ಸಾಧ್ಯವಿಲ್ಲ. ವಿವೇಕಾನಂದರು ಹಿಂದುತ್ವದ ಇದೇ ಭವ್ಯ ಬದುಕಿನಲ್ಲಿ ನಡೆದವರು ಎಂದರು.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…