ಪುತ್ತೂರು : ದೇಶದಲ್ಲಿ ಇಂದು ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ನಡೆಸುತ್ತಾರೆ, ನಾನು ಹಿಂದೂ ಆದರೆ ನನಗೆ ಹಿಂದುತ್ವ ಬೇಕಿಲ್ಲ ಎನ್ನುವ ಕಮಂಗಿಗಳಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲ ಎಂದು ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗ್ಡೆ ಹೇಳಿದರು.
ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಮಾಜಿ ಸಿಎಂ ಸಿದ್ಧರಾಮಯ್ಯರ ವಿರುದ್ಧ ಪರೋಕ್ಷ ದಾಳಿ ನಡೆಸಿದ ಅವರು ಹಿಂದುತ್ವದ ಬಗ್ಗೆ ಮಾತನಾಡುವ ಆ ಮನುಷ್ಯನಿಗೆ ಅವನ ರಕ್ತದ ಬಗ್ಗೆಯೇ ಗೊತ್ತಿಲ್ಲ. ಅಂತವ ಹಿಂದುತ್ವವೇ ಬೇಡ ಎನ್ನುವ ಮಾತನಾಡುತ್ತಾನೆ. ನಿನಗೆ ಬೇಕೋ,ಬೇಡವೋ ಎನ್ನುವುದನ್ನು ಯಾರು ಕೇಳಿದ್ದಾರೆ. ನಿನಗೆ ಹಿಂದುತ್ವ ಇಲ್ಲ ಅನ್ನೋದನ್ನ ನಾವೆಲ್ಲಾ ಪರಿಗಣಿಸಿ ಬಿಟ್ಟಾಗಿದೆ. ಅಂಥವರಿಂದ ನಮಗೆ ಹಿಂದುತ್ವದ ಪಾಠ ಬೇಕಾಗಿಲ್ಲ ಎಂದ ಅವರು ಜಾತಿಯ ಗೂಡನ್ನು ಬಿಟ್ಡು ಹೊರಗೆ ಬರದವರು ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ, ಸರಿಯಾಗಿ ಎರಡು ಪುಸ್ತಕವಿಟ್ಟರೆ ಅದನ್ನ ಓದುವ ಯೋಗ್ಯತೆ ಇಲ್ಲದವರು ಹಿಂದುತ್ವದ ಮಾತನಾಡುತ್ತಾರೆ.
ದೇವಸ್ಥಾನಕ್ಕೆ ಹೇಗೆ ಹೋಗಬೇಕು ಎನ್ನುವ ಪರಿಜ್ಞಾನವಿಲ್ಲದವರು ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.ಯಾರಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲವೋ ಅಂತವರು ಹಿಂದೂ ಆಗಿರಲು ಸಾಧ್ಯವಿಲ್ಲ. ವಿವೇಕಾನಂದರು ಹಿಂದುತ್ವದ ಇದೇ ಭವ್ಯ ಬದುಕಿನಲ್ಲಿ ನಡೆದವರು ಎಂದರು.
Join our Whatsapp group by clicking the below link 👇👇
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…