Featured

ಪುತ್ತೂರು : ಯಾರು ನಮ್ಮ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೋ ಅವರನ್ನ ಅಮನತುಗೊಳಿಸಿ : ಅರುಣ್ ಕುಮಾರ್ ಪುತ್ತಿಲ – Vishwanews24

ಪುತ್ತೂರು : ಯಾರು ನಮ್ಮ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೋ ಅವರನ್ನ ಅಮನತುಗೊಳಿಸಿ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪ ವಿಚಾರವಾಗಿ ಪೊಲೀಸರ ಅಮಾನವೀಯ ವರ್ತನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಕೆಂಡಾಮಂಡಲವಾಗಿದ್ದಾರೆ.

ಯಾರು ನಮ್ಮ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೋ ಅವರನ್ನ ಅಮನತುಗೊಳಿಸಿ, ಡಿವೈಎಸ್ಪಿ, ಸಂಪ್ಯ ಠಾಣಾ ಎಸ್ಐ ಹಾಗೂ ಸಿಬ್ಬಂದಿ ವರ್ಗದ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ,ಈ ಘಟನೆ ಬಗ್ಗೆ ದ.ಕ ಎಸ್ಪಿಯವರಲ್ಲಿ ಮಾತನಾಡಿದ್ದೇನೆ.

ಇಂತಹ ಕೃತ್ಯ ಮತ್ತೆ ಎಲ್ಲಿಯೂ ಮುಂದುವರಿಯಬಾರದು, ಇಂದು ಎಸ್ಪಿ ವಿಚಾರಣೆಗಾಗಿ ಪುತ್ತೂರಿಗೆ ಆಗಮಿಸ್ತಾರೆ, ಹಾಗಾಗಿ ಇಂದು ಸಂಜೆಯೊಳಗಡೆ ಯಾರು ಈ ದೌರ್ಜನ್ಯ ಎಸಗಿದ ಪೊಲೀಸರಿದ್ದರೋ ಅವರನ್ನ ಅಮಾನತು ಮಾಡಬೇಕು, ಜೊತೆಗೆ ಪೊಲೀಸರ ಮೇಲೆ ಕೇಸ್ ದಾಖಲಿಸಬೇಕು. ಈ ದೌರ್ಜನ್ಯದ ಬಗ್ಗೆ ಮಾನವ ಹಕ್ಕಿಗೂ ದೂರು ನೀಡುತ್ತೇವೆ.

ಇನ್ನು ಕಾಂಗ್ರೆಸ್ ಸರ್ಕಾರ ಬಂದ ಮೇಲೆ‌ ಪುತ್ತೂರಿನಲ್ಲಿ ಹಲವು ಘಟನೆ ನಡೆದಿದೆ. ಅದರಲ್ಲಿ ಈ ಪೊಲೀಸ್ ದೌರ್ಜನ್ಯ ಕೇಸ್ ಕೂಡ ಒಂದು, ಇವೆಲ್ಲವನ್ನ ಹಿಂದೂ ಸಮಾಜ ಸೂಕ್ಷ್ಮವಾಗಿ ಗಮನಿಸುತ್ತಿದೆ.ಇದಕ್ಕೆ ಈ ಕೂಡಲೇ ಕಡಿವಾಣ ಹಾಕಿದ್ರೆ ಚೆನ್ನಾಗಿರುತ್ತೆ, ಇಲ್ಲದಿದ್ದಲ್ಲಿ ಹಿಂದೂ ಸಂಘಟನೆ ಸಂಘರ್ಷಕ್ಕೂ ಸಿದ್ಧರಿದ್ದೇವೆ. ಶಾಂತಿ ಸುವ್ಯವಸ್ಥೆ ಹದಗೆಟ್ರೆ ಇದಕ್ಕೆ ನೇರ ಹೊಣೆ ಪೊಲೀಸ್ ಇಲಾಖೆ ಎಂದು ಅರುಣ್ ಕುಮಾರ್ ಪುತ್ತಿಲ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago