ಪುತ್ತೂರು: ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್ಸ್ಟೆಬಲ್ ಹರ್ಷಿತ್ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಡಿವೈಎಸ್ಪಿ ವೀರಯ್ಯ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ನಗರದ ಬಸ್ ನಿಲ್ದಾಣದ ಬಳಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಪೊಲೀಸರು ಬಂಧಿಸಿ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
ಹಲ್ಲೆಗೊಳಗಾಗಿದ್ದ ಯುವಕ ಅವಿನಾಶ್ ಅವರ ತಂದೆ ವೇಣುನಾಥ ನರಿಮೊಗರು ನೀಡಿರುವ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ ಅವರು ಜೂ.16ರಂದು ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…