Featured

ಪುತ್ತೂರು ಯುವತಿಗೆ ವಂಚನೆ ಪ್ರಕರಣ : ಜನವರಿ 31ರೊಳಗೆ ಮದುವೆ ಆಗದಿದ್ದರೆ ಮುಂದಕ್ಕೆ ಸಂಧಾನವೇ ಇಲ್ಲ : ಪ್ರತಿಭಾ ಕುಳಾಯಿ ಎಚ್ಚರಿಕೆ – vishwanews24

ಪುತ್ತೂರು ‘ಲವ್–ಸೆಕ್ಸ್–ಧೋಖಾ’ಪ್ರಕರಣ : ಜ 31ರೊಳಗೆ ಮದುವೆ ನಡೆಯದಿದ್ದರೆ ಫೆ. 7ರಂದು ನಾಮಕರಣ – ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನವರಿ 24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು. ಆದರೆ ಮಗುವಿನ ಅಜ್ಜಿ ನಮಿತಾಗೆ ಆಚಾರ್ಯ ಸಮುದಾಯದ ಉಡುಪಿ ಒಕ್ಕೂಟದ ಪದಾಧಿಕಾರಿ ಮಧು ಆಚಾರ್ಯ ಎಂಬವರು ಕರೆ ಮಾಡಿ ಕೃಷ್ಣ ಜೆ.ರಾವ್ ಅವರ ಕುಟುಂಬ ಮದುವೆಗೆ ಒಪ್ಪಿರುವುದಾಗಿ ತಿಳಿಸಿ, ಸ್ವಲ್ಪ ಕಾಲಾವಕಾಶ ಕೇಳಿದ್ದಲ್ಲದೆ ತೊಟ್ಟಿಲು ಹಾಕುವ ಕಾರ್ಯಕ್ರಮ ಬೇಡ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪಿ ನಾಮಕರಣದ ದಿನ ಬದಲಾಯಿಸಲಾಗಿದೆ. ಹಿಂದೆಯೂ ಆರು ತಿಂಗಳು ನಮ್ಮನ್ನು ದಾರಿ ತಪ್ಪಿಸಲಾಗಿದ್ದು ಈ ಬಾರಿ ಹಾಗಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಧಾನಕ್ಕೆ ನಮಿತಾ ಮತ್ತು ಆಕೆಯ ಮಗಳು ಮಾತ್ರ ಬರಬೇಕು ಎಂಬ ಷರತ್ತನ್ನು ವಿಧಿಸಿದ್ದು, ನಾವದನ್ನು ಒಪ್ಪುವುದಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ. ಯಾಕೆಂದರೆ ಅವರಲ್ಲಿಗೆ ಹೋದರೆ ಏನು ಬೇಕಾದರೂ ಆಗಬಹುದೆನ್ನುವ ಭಯವಿದೆ. ಆದರೂ ಸಂಧಾನಕ್ಕೆ ನಾನು ಹಾಗೂ ನಂಜುಂಡಿ ಹೋಗುವುದಿಲ್ಲ. ಸಂಧಾನ ಪುತ್ತೂರು ಪೊಲೀಸ್ ಠಾಣೆಯಲ್ಲೇ ಆಗಲಿ ಅಥವಾ ಮಂಗಳೂರು ಎಸ್ಪಿ ಅವರ ಬಳಿ ನಡೆಯಲಿ ಎಂದು ಪ್ರತಿಭಾ ಬೇಡಿಕೆ ಮುಂದಿಟ್ಟಿದ್ದಾರೆ.

ಕೃಷ್ಣ ಜೆ.ರಾವ್ ಕುಟುಂಬ ಮದುವೆಗೆ ಒಪ್ಪುವುದಿಲ್ಲ ಎಂದು ಪುತ್ತೂರು ಶಾಸಕರೂ ಹೇಳಿದ್ದಾರೆ. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿದ್ದು ಕೇಸಿನಿಂದ ಹೊರಬರಲು ನಾಟಕ ನಡೆಯುತ್ತಿರುವ ಶಂಕೆ ಇದೆ. ಹಿಂದೆಯೂ ಮಗುವನ್ನು ಆಶ್ರಮಕ್ಕೆ ನೀಡಬೇಕು, ಕೇಸು ಹಿಂದಕ್ಕೆ ಪಡೆಯಬೇಕು, ಮದುವೆಯ ನಂತರ ವಿಚ್ಛೇದನ ಪಡೆಯುವಂತೆ ಬೇಡಿಕೆ ಇಟ್ಟಿದ್ದರು ಎಂದು ಪ್ರತಿಭಾ ಆರೋಪಿಸಿದರು.

ಮದುವೆ ಕಾನೂನುಬದ್ಧವಾಗಿ ಆನ್ ಲೈನ್ ಅಥವಾ ಯಾವುದೇ ರೀತಿಯಲ್ಲಾದರೂ ಆಗಲಿ. ಯಾವುದೇ ರೀತಿಯಲ್ಲಾದರೂ ಈ ಪ್ರಕರಣ ಅಂತ್ಯವಾಗಬೇಕು, ಇಬ್ಬರ ತಪ್ಪಿಗೂ ಪ್ರಾಯಶ್ಚಿತವಾಗಬೇಕು. ಮದುವೆಯಾಗಿ ಒಂದಾಗದಿದ್ದರೆ ಕಾನೂನು ಪ್ರಕಾರ ವಿಚ್ಛೇದನ ಪಡೆಯಲಿ. ಯಾವುದೇ ಗೋಷ್ಠಿ ಅಥವಾ ಸಭೆಗಳಿಗೆ ಹೋಗಬಾರದೆಂದು ಷರತ್ತು ವಿಧಿಸಿದ್ದರಿಂದ ನಮಿತಾ ಭಾಗವಹಿಸಿಲ್ಲ.

ಜನವರಿ 31ರೊಳಗೆ ಮದುವೆ ಆಗದಿದ್ದರೆ ಮುಂದಕ್ಕೆ ಸಂಧಾನವೇ ಇಲ್ಲ, ಫೆ.7ರಂದು ಅದ್ಧೂರಿಯಾಗಿ ಮಗುವಿನ ನಾಮಕರಣ ನಡೆಯಲಿದೆ. ಜೊತೆಗೆ ಕಾನೂನಾತ್ಮಕ ಹೋರಾಟ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago