Featured

ಪುತ್ತೂರು ಯುವತಿಗೆ ವಂಚನೆ ಪ್ರಕರಣ : ಜನವರಿ 31ರೊಳಗೆ ಮದುವೆ ಆಗದಿದ್ದರೆ ಮುಂದಕ್ಕೆ ಸಂಧಾನವೇ ಇಲ್ಲ : ಪ್ರತಿಭಾ ಕುಳಾಯಿ ಎಚ್ಚರಿಕೆ – vishwanews24

ಪುತ್ತೂರು ‘ಲವ್–ಸೆಕ್ಸ್–ಧೋಖಾ’ಪ್ರಕರಣ : ಜ 31ರೊಳಗೆ ಮದುವೆ ನಡೆಯದಿದ್ದರೆ ಫೆ. 7ರಂದು ನಾಮಕರಣ – ಪ್ರತಿಭಾ ಕುಳಾಯಿ

ಮಂಗಳೂರು : ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನವರಿ 24ರಂದು ಕಲ್ಲಡ್ಕದಲ್ಲಿ ಮಗುವಿಗೆ ನಾಮಕರಣಕ್ಕೆ ದಿನ ನಿಗದಿಪಡಿಸಲಾಗಿತ್ತು. ಆದರೆ ಮಗುವಿನ ಅಜ್ಜಿ ನಮಿತಾಗೆ ಆಚಾರ್ಯ ಸಮುದಾಯದ ಉಡುಪಿ ಒಕ್ಕೂಟದ ಪದಾಧಿಕಾರಿ ಮಧು ಆಚಾರ್ಯ ಎಂಬವರು ಕರೆ ಮಾಡಿ ಕೃಷ್ಣ ಜೆ.ರಾವ್ ಅವರ ಕುಟುಂಬ ಮದುವೆಗೆ ಒಪ್ಪಿರುವುದಾಗಿ ತಿಳಿಸಿ, ಸ್ವಲ್ಪ ಕಾಲಾವಕಾಶ ಕೇಳಿದ್ದಲ್ಲದೆ ತೊಟ್ಟಿಲು ಹಾಕುವ ಕಾರ್ಯಕ್ರಮ ಬೇಡ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪಿ ನಾಮಕರಣದ ದಿನ ಬದಲಾಯಿಸಲಾಗಿದೆ. ಹಿಂದೆಯೂ ಆರು ತಿಂಗಳು ನಮ್ಮನ್ನು ದಾರಿ ತಪ್ಪಿಸಲಾಗಿದ್ದು ಈ ಬಾರಿ ಹಾಗಾಗಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಧಾನಕ್ಕೆ ನಮಿತಾ ಮತ್ತು ಆಕೆಯ ಮಗಳು ಮಾತ್ರ ಬರಬೇಕು ಎಂಬ ಷರತ್ತನ್ನು ವಿಧಿಸಿದ್ದು, ನಾವದನ್ನು ಒಪ್ಪುವುದಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ. ಯಾಕೆಂದರೆ ಅವರಲ್ಲಿಗೆ ಹೋದರೆ ಏನು ಬೇಕಾದರೂ ಆಗಬಹುದೆನ್ನುವ ಭಯವಿದೆ. ಆದರೂ ಸಂಧಾನಕ್ಕೆ ನಾನು ಹಾಗೂ ನಂಜುಂಡಿ ಹೋಗುವುದಿಲ್ಲ. ಸಂಧಾನ ಪುತ್ತೂರು ಪೊಲೀಸ್ ಠಾಣೆಯಲ್ಲೇ ಆಗಲಿ ಅಥವಾ ಮಂಗಳೂರು ಎಸ್ಪಿ ಅವರ ಬಳಿ ನಡೆಯಲಿ ಎಂದು ಪ್ರತಿಭಾ ಬೇಡಿಕೆ ಮುಂದಿಟ್ಟಿದ್ದಾರೆ.

ಕೃಷ್ಣ ಜೆ.ರಾವ್ ಕುಟುಂಬ ಮದುವೆಗೆ ಒಪ್ಪುವುದಿಲ್ಲ ಎಂದು ಪುತ್ತೂರು ಶಾಸಕರೂ ಹೇಳಿದ್ದಾರೆ. ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿದ್ದು ಕೇಸಿನಿಂದ ಹೊರಬರಲು ನಾಟಕ ನಡೆಯುತ್ತಿರುವ ಶಂಕೆ ಇದೆ. ಹಿಂದೆಯೂ ಮಗುವನ್ನು ಆಶ್ರಮಕ್ಕೆ ನೀಡಬೇಕು, ಕೇಸು ಹಿಂದಕ್ಕೆ ಪಡೆಯಬೇಕು, ಮದುವೆಯ ನಂತರ ವಿಚ್ಛೇದನ ಪಡೆಯುವಂತೆ ಬೇಡಿಕೆ ಇಟ್ಟಿದ್ದರು ಎಂದು ಪ್ರತಿಭಾ ಆರೋಪಿಸಿದರು.

ಮದುವೆ ಕಾನೂನುಬದ್ಧವಾಗಿ ಆನ್ ಲೈನ್ ಅಥವಾ ಯಾವುದೇ ರೀತಿಯಲ್ಲಾದರೂ ಆಗಲಿ. ಯಾವುದೇ ರೀತಿಯಲ್ಲಾದರೂ ಈ ಪ್ರಕರಣ ಅಂತ್ಯವಾಗಬೇಕು, ಇಬ್ಬರ ತಪ್ಪಿಗೂ ಪ್ರಾಯಶ್ಚಿತವಾಗಬೇಕು. ಮದುವೆಯಾಗಿ ಒಂದಾಗದಿದ್ದರೆ ಕಾನೂನು ಪ್ರಕಾರ ವಿಚ್ಛೇದನ ಪಡೆಯಲಿ. ಯಾವುದೇ ಗೋಷ್ಠಿ ಅಥವಾ ಸಭೆಗಳಿಗೆ ಹೋಗಬಾರದೆಂದು ಷರತ್ತು ವಿಧಿಸಿದ್ದರಿಂದ ನಮಿತಾ ಭಾಗವಹಿಸಿಲ್ಲ.

ಜನವರಿ 31ರೊಳಗೆ ಮದುವೆ ಆಗದಿದ್ದರೆ ಮುಂದಕ್ಕೆ ಸಂಧಾನವೇ ಇಲ್ಲ, ಫೆ.7ರಂದು ಅದ್ಧೂರಿಯಾಗಿ ಮಗುವಿನ ನಾಮಕರಣ ನಡೆಯಲಿದೆ. ಜೊತೆಗೆ ಕಾನೂನಾತ್ಮಕ ಹೋರಾಟ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago