ಪುತ್ತೂರು: ಚೂರಿ ಇರಿತಕ್ಕೊಳಗಾದ ಯುವತಿ ಮೃತ್ಯು-ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಹಾಡು ಹಗಲೇ ಯುವಕನೊಬ್ಬನಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ.
ವಿಟ್ಲ ಮೂಲದ ಗೌರಿ (18) ಕೊಲೆಯಾದ ಯುವತಿ.
ಬಂಟ್ವಾಳ ತಾಲೂಕಿನ ಮಣಿ ನಾಲ್ಕೂರು ಗ್ರಾಮದ ನೈಬೇಲು ನಿವಾಸಿ ಪದ್ಮರಾಜ್ ಬಂಧಿತ ಆರೋಪಿಗಳು. ಯುವತಿ ಗೌರಿ ಪುತ್ತೂರು ಬಸ್ ನಿಲ್ದಾಣ ಬಳಿಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪದ್ಮರಾಜ್ ಜೆಸಿಬಿ ಆಪರೇಟರ್ ಕೆಲಸ ನಿರ್ವಹಿಸುತ್ತಿದ್ದನು.
ಇಂದು ಮಧ್ಯಾಹ್ನ ಯುವಕ ಪದ್ಮರಾಜ್ ತನ್ನ ಪಲ್ಸರ್ ಬೈಕ್ ನಲ್ಲಿ ಯುವತಿ ಕೆಲಸ ಮಾಡುತ್ತಿದ್ದ ಅಂಗಡಿ ಬಳಿ ತೆರಳಿದ್ದಾನೆ.
ಮೊದಲು ಪುತ್ತೂರಿನ ಬಸ್ ನಿಲ್ದಾಣದ ಬಳಿ ಯುವತಿ ಗೌರಿ ಹಾಗೂ ಯುವಕ ಪದ್ಮರಾಜ್ ನಡುವೆ ಯಾವುದೋ ವಿಷಯಕ್ಕಾಗಿ ಗಲಾಟೆ ನಡೆದಿದೆ.
ಬಳಿಕ ಪುತ್ತೂರು ಮಹಿಳಾ ಠಾಣೆ ಬಳಿ ಅವರಿಬ್ಬರ ಮಧ್ಯೆ ಗಲಾಟೆಯಾಗಿದೆ.ಈ ವೇಳೆ ಯುವತಿ ಗೌರಿ ತಾನು ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ತಿಳಿಸಿದ್ದಾಳೆ.
ಆಗ ಪದ್ಮರಾಜ್ ಕೋಪದಿಂದ ಆಕೆಯ ಕುತ್ತಿಗೆಗೆ ಚೂರಿಯಿಂದ ಇರಿದಿದ್ದು, ಆಕೆ ನೆಲಕ್ಕೆ ಬಿದ್ದ ಕೂಡಲೇ ಆತ ಅಲ್ಲಿಂದ ಬೈಕಿನಲ್ಲಿ ಪರಾರಿಯಾಗಿದ್ದಾನೆ.
ಯುವತಿಯ ಕುತ್ತಿಗೆಗೆ ಮೂರರಿಂದ ನಾಲ್ಕು ಬಾರಿ ಇರಿಯಲಾಗಿದ್ದು, ಆಕೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು.
ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿತ್ತು.
ಆದರೆ ದಾರಿ ಮಧ್ಯೆ ಆಕೆ ಮೃತ ಪಟ್ಟಿದ್ದಾಳೆ.
ಪರಾರಿಯಾಗಿದ್ದ ಆರೋಪಿ ಪದ್ಮರಾಜ್ ನನ್ನು ಪುತ್ತೂರು ನಗರ ಪೋಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು, ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಅವರು ಮಾಹಿತಿ ನೀಡಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…